ಯಾದಗಿರಿ: ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳದಿದ್ದರೆ ಮುಖ್ಯಮಂತ್ರಿ ನಿವಾಸದ ಎದುರು ನವೆಂಬರ್ 15 ರಂದು ಧರಣಿ ನಡೆಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಎಚ್ಚರಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಇಲ್ಲಿನ ನಗರ ಪೋಲಿಸ್ ಠಾಣೆ ಪಿಎಸ್ಐ ಬಾಪುಗೌಡ ಪಾಟೀಲ ಅವರಿಗೆಕಡ್ಡಾಯ ರಜೆ ಮೇಲೆ ತೆರಳುವಂತೆ ಸೂಚನೆ ನೀಡಿದ್ದಾರೆ.