ಯಾದಗಿರಿ: ನಗರ ಪೊಲೀಸ್ ಠಾಣೆಯಲ್ಲಿ 2015ರ ಜುಲೈ 7ರಂದು ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ನರೇಂದ್ರ ರಾಠೋಡ, ಬಾಬುಗೌಡ ಬಸವರಾಜ ಪಾಟೀಲ, ರಾಜುಗೌಡ ರಾಚಣ್ಣ ಸಾಹುಕಾರ ಎಂಬುವವರಿಗೆ ಇಲ್ಲಿನ ಸಿಜೆಎಂ ನ್ಯಾಯಾಲಯ 1 ವರ್ಷ ಜೈಲು ಮತ್ತು ತಲಾ ₹ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.
2015ರಲ್ಲಿ ನಗರದ ಲಾಡಿಜ್ಗಲ್ಲಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ವಿತರಿಸಬೇಕಿದ್ದ ಹಾಲಿನ ಪೌಡರ್ ದಾಸ್ತಾನನ್ನು ಆಟೊದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದೆ ಎನ್ನುವ ಮಾಹಿತಿ ಆಧರಿಸಿ ಪೊಲೀಸರು ದಾಳಿ ಮಾಡಿ ತಲಾ 500 ಗ್ರಾಂ ತೂಕದ 340 ಹಾಲಿನ ಪುಡಿ ಪ್ಯಾಕೆಟ್ಗಳನ್ನು ವಶಪಡಿಸಿಕೊಂಡಿದ್ದರು.