<p><strong>ಶಹಾಪುರ</strong>: ಇಲ್ಲಿನ ಟಿಎಪಿಎಂಎಸ್ನ ₹ 2.6 ಕೋಟಿ ಮೌಲ್ಯದ ಅಕ್ಕಿ ನಾಪತ್ತೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧನದಲ್ಲಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರನ್ನು ಇಲ್ಲಿನ ನ್ಯಾಯಾಲಯವು ಮತ್ತೆ ಮೂರು ದಿನ ಪೊಲೀಸರ ವಶಕ್ಕೆ ನೀಡಿದೆ.</p>.<p>ನ್ಯಾಯಾಂಗ ಬಂಧನದಲ್ಲಿದ್ದ ಮಣಿಕಂಠ ರಾಠೋಡ ಅವರನ್ನು ಪೊಲೀಸರು ವಿಚಾರಣೆಗಾಗಿ ಜುಲೈ 20 ರವರೆಗೆ ವಶಕ್ಕೆ ಪಡೆದಿದ್ದರು. ಶನಿವಾರ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯ ಆಗಿದ್ದರಿಂದ ಪೊಲೀಸರು ಶಹಾಪುರ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ ಅವರ ಮುಂದೆ ಶನಿವಾರ ಹಾಜರುಪಡಿಸಿದರು. </p>.<p>ಆರೋಪಿ ಮಣಿಕಂಠ ರಾಠೋಡ ತನಿಖೆಗೆ ಸಹಕರಿಸುತ್ತಿಲ್ಲ. ಇನ್ನೂ ಮೂರು ದಿನ (ಜುಲೈ23ರವರೆಗೆ) ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ತನಿಖಾಧಿಕಾರಿ ಆಗಿರುವ ಸುರಪುರ ಡಿವೈಎಸ್ಪಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು.</p>.<p>ತನಿಖಾಧಿಕಾರಿಯ ಮನವಿಗೆ ನ್ಯಾಯಾಧೀಶರು ಷರತ್ತುಗಳೊಂದಿಗೆ ಮಣಿಕಂಠ ರಾಠೋಡದ ಅವರಿಗೆ ಯಾವುದೇ ತೊಂದರೆ ಹಾಗೂ ಕಿರುಕುಳ ನೀಡಬಾರದು. ನಂತರ ವೈದ್ಯಕೀಯ ತಪಾಸಣೆ ಮಾಡಿ ಹಾಜರು ಪಡಿಸಬೇಕು ಎಂಬ ಷರತ್ತಿನೊಂದಿಗೆ ಅನುಮತಿ ನೀಡಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಮಣಿಕಂಠ ರಾಠೋಡ ಪೊಲೀಸ್ ಕಸ್ಟಡಿ ಅವಧಿ ಶನಿವಾರಕ್ಕೆ ಮುಕ್ತಾಯಗೊಂಡಿತ್ತು. ತನಿಖೆಗೆ ಸಹಕರಿಸದ ಕಾರಣ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಮತ್ತೆ ಮೂರು ದಿವಸ ಆರೋಪಿ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ’ ಎಂದು ಶಹಾಪುರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಎಂ.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ</strong>: ಇಲ್ಲಿನ ಟಿಎಪಿಎಂಎಸ್ನ ₹ 2.6 ಕೋಟಿ ಮೌಲ್ಯದ ಅಕ್ಕಿ ನಾಪತ್ತೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧನದಲ್ಲಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರನ್ನು ಇಲ್ಲಿನ ನ್ಯಾಯಾಲಯವು ಮತ್ತೆ ಮೂರು ದಿನ ಪೊಲೀಸರ ವಶಕ್ಕೆ ನೀಡಿದೆ.</p>.<p>ನ್ಯಾಯಾಂಗ ಬಂಧನದಲ್ಲಿದ್ದ ಮಣಿಕಂಠ ರಾಠೋಡ ಅವರನ್ನು ಪೊಲೀಸರು ವಿಚಾರಣೆಗಾಗಿ ಜುಲೈ 20 ರವರೆಗೆ ವಶಕ್ಕೆ ಪಡೆದಿದ್ದರು. ಶನಿವಾರ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯ ಆಗಿದ್ದರಿಂದ ಪೊಲೀಸರು ಶಹಾಪುರ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ ಅವರ ಮುಂದೆ ಶನಿವಾರ ಹಾಜರುಪಡಿಸಿದರು. </p>.<p>ಆರೋಪಿ ಮಣಿಕಂಠ ರಾಠೋಡ ತನಿಖೆಗೆ ಸಹಕರಿಸುತ್ತಿಲ್ಲ. ಇನ್ನೂ ಮೂರು ದಿನ (ಜುಲೈ23ರವರೆಗೆ) ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ತನಿಖಾಧಿಕಾರಿ ಆಗಿರುವ ಸುರಪುರ ಡಿವೈಎಸ್ಪಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು.</p>.<p>ತನಿಖಾಧಿಕಾರಿಯ ಮನವಿಗೆ ನ್ಯಾಯಾಧೀಶರು ಷರತ್ತುಗಳೊಂದಿಗೆ ಮಣಿಕಂಠ ರಾಠೋಡದ ಅವರಿಗೆ ಯಾವುದೇ ತೊಂದರೆ ಹಾಗೂ ಕಿರುಕುಳ ನೀಡಬಾರದು. ನಂತರ ವೈದ್ಯಕೀಯ ತಪಾಸಣೆ ಮಾಡಿ ಹಾಜರು ಪಡಿಸಬೇಕು ಎಂಬ ಷರತ್ತಿನೊಂದಿಗೆ ಅನುಮತಿ ನೀಡಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಮಣಿಕಂಠ ರಾಠೋಡ ಪೊಲೀಸ್ ಕಸ್ಟಡಿ ಅವಧಿ ಶನಿವಾರಕ್ಕೆ ಮುಕ್ತಾಯಗೊಂಡಿತ್ತು. ತನಿಖೆಗೆ ಸಹಕರಿಸದ ಕಾರಣ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಮತ್ತೆ ಮೂರು ದಿವಸ ಆರೋಪಿ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ’ ಎಂದು ಶಹಾಪುರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಎಂ.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>