ಶಹಾಪುರ: ತಾಲ್ಲೂಕಿನ ಇಂಗಳಿಗಿ ಗ್ರಾಮದಲ್ಲಿ ಸಿದ್ದಪ್ಪ ಭೀಮರಾಯ ಕಂದಕೂರ ಎಂಬ ರೈತ ಹತ್ತಿ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ₹60 ಸಾವಿರ ಮೌಲ್ಯದ ಗಾಂಜಾ ಗಿಡಗಳನ್ನು ಭೀಮರಾಯನಗುಡಿ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಅಂದಾಜು 20 ಕೆ.ಜಿ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ60 ಸಾವಿರ ಎಂದು ಪೊಲೀಸರು ತಿಳಿಸಿದರು. ಜಪ್ತಿ ಕಾಲಕ್ಕೆ ಶಹಾಪುರ ತಹಶೀಲ್ದಾರ್ ಜಗನಾಥರಡ್ಡಿ ಇದ್ದರು. ಭೀಮರಾಯನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.