ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರಪುರ: ಮಾಸ್ಕ್ ಜಾಗೃತಿ ಜಾಥಾ

Last Updated 2 ಅಕ್ಟೋಬರ್ 2020, 15:35 IST
ಅಕ್ಷರ ಗಾತ್ರ

ಸುರಪುರ: ‘ಕೋವಿಡ್-19 ಸೋಂಕನ್ನು ತೊಲಗಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯ. ರೋಗದ ಬಗ್ಗೆ ಜನರು ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಅಮೂಲ್ಯವಾದ ಜೀವ ಉಳಿಸಿಕೊಳ್ಳಲು ಅಂತರದೊಂದಿಗೆ, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು’ ಎಂದು ತಹಶೀಲ್ದಾರ್ ನಿಂಗಣ್ಣ ಬಿರಾದಾರ ಮನವಿ ಮಾಡಿದರು.

ವಾಲ್ಮೀಕಿ ವೃತ್ತದಲ್ಲಿ ಶುಕ್ರವಾರ ಮಾಸ್ಕ್ ದಿನಾಚರಣೆ ಅಂಗವಾಗಿ ನಗರಸಭೆ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಏರ್ಪಡಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗೋಪಾಲ ಸ್ವಾಮಿ ದೇವಸ್ಥಾನ, ವಲ್ಲಭಭಾಯಿ ಪಟೇಲ್, ದರಬಾರ ರೋಡ್, ಗಾಂಧಿ ವೃತ್ತ, ಡಾ.ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಮೆರವಣಿಗೆ ನಡೆಯಿತು.

ಈ ವೇಳೆ ನಗರಸಭೆ ಸಿಬ್ಬಂದಿ ಜನರಿಗೆ ಉಚಿತವಾಗಿ ಮಾಸ್ಕ್ ವಿತರಿಸಿದರು. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಲ್ಲದಿದ್ದರೆ ದಂಡ ವಿಧಿಸಲಾಗುವುದು. ಅಂತರದೊಂದಿಗೆ ಸ್ಯಾನಿಟೈಸರ್ ಬಳಸುವ ಕುರಿತು ಧ್ವನಿ ವರ್ಧಕದ ಮೂಲಕ ಮಾಹಿತಿ ನೀಡಲಾಯಿತು. ಪೌರಾಯುಕ್ತ ಶಾಂತಪ್ಪ ಹೊಸೂರು, ವ್ಯವಸ್ಥಾಪಕ ಯಲ್ಲಪ್ಪನಾಯಕ ಡೊಣ್ಣಿಗೇರಾ, ಬಸವರಾಜ ಕೊಡೇಕಲ್, ಆರೋಗ್ಯ ನಿರೀಕ್ಷಕ ಶಿವಪುತ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT