ನಾರಾಯಣಪುರ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಮಂಗಳವಾರ ವಿದ್ಯಾರ್ಥಿಗಳು ಗಣಿತ ವಿಷಯದ ಪರೀಕ್ಷೆ ಬರೆದರು.
ಗಣಿತ ವಿಷಯಕ್ಕೆ ಒಟ್ಟು 413 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ಪೈಕಿ 405 ಮಂದಿ ಹಾಜರಾಗಿದ್ದರು. 8 ವಿದ್ಯಾರ್ಥಿಗಳು ಗೈರಾಗಿದ್ದರು. ಪರೀಕ್ಷಾ ಕೇಂದ್ರಕ್ಕೆ ಡಯಟ್ನ ಉಪನಿರ್ದೇಶಕ ವೃಷಭೇಂದ್ರಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರೀಕ್ಷಾ ಕೇಂದ್ರದಲ್ಲಿ ಮೂಲಸೌಕರ್ಯಗಳು, ಬೆಂಚ್ ವ್ಯವಸ್ಥೆ ಸೇರಿ ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದನ್ನು ವೀಕ್ಷಿಸಿದರು ಎಂದು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಸಂಗಯ್ಯ ಬಿಕ್ಷಾವತಿಮಠ ತಿಳಿಸಿದರು.
ಸ್ಥಾನಿಕ ಜಾಗೃತದಳದ ಅಧಿಕಾರಿ ಪಾಲಾ ನಾಯಕ, ಉಪನ್ಯಾಸಕ ದೊಡ್ಡಪ್ಪ ಹೊಸಮನೆ, ಮಾದವರೆಡ್ಡಿ, ಚನ್ನಪ್ಪ, ವೀಕ್ಷಕರಾದ ವಿಜಯಕುಮಾರ ಅರಳಿ, ಸಿಆರ್ಪಿ ಮೌನೇಶ ಪಾಲ್ಗೊಂಡಿದ್ದರು. ಪರೀಕ್ಷಾ ಕೇಂದ್ರದ ಸುತ್ತಲು ಸ್ಥಳೀಯ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಗೃಹರಕ್ಷಕದಳದ ಸಿಬ್ಬಂದಿ ಸೂಕ್ತ ಬಂದೋಬಸ್ತ್ ಒದಗಿಸಿದ್ದರು.