ಸುರಪುರ ತಾಲ್ಲೂಕಿನ ತಿಂಥಣಿ ಮೌನೇಶ್ವರ ಜಾತ್ರೆ ರದ್ದು

ಯಾದಗಿರಿ: ‘ಸುರಪುರ ತಾಲ್ಲೂಕಿನ ತಿಂಥಣಿ ಮೌನೇಶ್ವರ ಜಾತ್ರೆ ರದ್ದುಪಡಿಸಲಾಗಿದೆ. ಭಕ್ತರು ಸಹಕರಿಸಬೇಕು’ ಎಂದು ಜಿಲ್ಲಾಡಳಿತ ತಿಳಿಸಿದೆ.
‘ಈ ತಿಂಗಳು ಜಾತ್ರೆ ನಡೆಯಬೇಕಿತ್ತು. ಪ್ರತಿ ವರ್ಷ ಹೊರ ಜಿಲ್ಲೆಗಳು ಹಾಗೂ ಅಂತರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಾರೆ. ಕೋವಿಡ್ ತಡೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷ್ಣಾ ನದಿಯ ತಟದಲ್ಲಿರುವ ತಿಂಥಣಿ ಗ್ರಾಮದಲ್ಲಿ ದೇವಸ್ಥಾನವಿದೆ. ಪ್ರತಿವರ್ಷ ಜಾತ್ರಾ ಮಹೋತ್ಸವ ಸರ್ಕಾರಕ್ಕೆ ಅಧಿಕ ಲಾಭ ತಂದು ಕೊಡುತ್ತಿತ್ತು. ಸಾರಿಗೆ, ಭಕ್ತರ ಕಾಣಿಕೆ, ತೆಂಗಿನಕಾಯಿ ಹರಾಜು ಪ್ರಕ್ರಿಯೆ ಮೂಲಕ ಆದಾಯ ಬರುತ್ತಿತ್ತು. ಆರ್ಥಿಕ ಸಂಕಷ್ಟದಲ್ಲಿರುವ ಸರ್ಕಾರಕ್ಕೆ ಪುನಶ್ಚೇತನ ನೀಡಲು ಜಾತ್ರಾ ಮಹೋತ್ಸವ ವರದಾನವಾಗುತ್ತಿತ್ತು.
ಶೇ 100ರಷ್ಟು ಸಿನಿಮಾ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ದೇವಸ್ಥಾನದ ಉತ್ಸವಗಳಿಗೆ ನಿರ್ಬಂಧ ಏಕೆ ಎಂದು ಭಕ್ತರು ಪ್ರಶ್ನಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.