<p><strong>ಯಾದಗಿರಿ</strong>: ಮುಂಬರುವ ಬಜೆಟ್ನಲ್ಲಿ ಮೇದಾರ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ₹ 250 ಕೋಟಿ ಅನುದಾನ ಮೀಸಲಿಡಬೇಕು ಎಂದು ಮೇದಾರ ಯುವ ಘಟಕದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಬೆಂಗಳೂರಿನಲ್ಲಿ ಗುರುವಾರ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ಕುಮಾರ್ ಲಿಂಗೇರಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಾಗರ್ ಮುಂಡರಗಿ ಸೇರಿ ಇತರರು ಮನವಿ ಪತ್ರ ಸಲ್ಲಿಕೆ ಮಾಡಿದರು.</p>.<p>ರಾಜ್ಯದಲ್ಲಿ ಮೇದಾರ ಸಮುದಾಯ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅತಿ ನಿರ್ಗತಿಕರೂ ಆಗಿದ್ದಾರೆ. ಹಲವರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈಗ ನೀಡುತ್ತಿರುವ ಅನುದಾನವೂ ಸಾಲುತ್ತಿಲ್ಲ. ಪರಿಶಿಷ್ಟ ಪಂಗಡದಲ್ಲಿ ಇರುವ ಈ ಸಮುದಾಯಕ್ಕೆ ₹ 250 ಕೋಟಿ ಮೀಸಲಿಡಬೇಕು ಎಂದು ಕೋರಿದ್ದಾರೆ.</p>.<p>ಸಮುದಾಯದ ಕುಲ ಪುರುಷ ಮೇದಾರ ಕೇತೇಶ್ವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಬೇಕು. ಸಮುದಾಯದ ಬಹುತೇಕರು ಅರಣ್ಯ ಅಂಚಿನ ಆದಿವಾಸಿಗಳಾಗಿದ್ದು, ಪೌಷ್ಟಿಕ ಆಹಾರದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ, ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಮುಂಬರುವ ಬಜೆಟ್ನಲ್ಲಿ ಮೇದಾರ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ₹ 250 ಕೋಟಿ ಅನುದಾನ ಮೀಸಲಿಡಬೇಕು ಎಂದು ಮೇದಾರ ಯುವ ಘಟಕದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಬೆಂಗಳೂರಿನಲ್ಲಿ ಗುರುವಾರ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ಕುಮಾರ್ ಲಿಂಗೇರಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಾಗರ್ ಮುಂಡರಗಿ ಸೇರಿ ಇತರರು ಮನವಿ ಪತ್ರ ಸಲ್ಲಿಕೆ ಮಾಡಿದರು.</p>.<p>ರಾಜ್ಯದಲ್ಲಿ ಮೇದಾರ ಸಮುದಾಯ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅತಿ ನಿರ್ಗತಿಕರೂ ಆಗಿದ್ದಾರೆ. ಹಲವರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈಗ ನೀಡುತ್ತಿರುವ ಅನುದಾನವೂ ಸಾಲುತ್ತಿಲ್ಲ. ಪರಿಶಿಷ್ಟ ಪಂಗಡದಲ್ಲಿ ಇರುವ ಈ ಸಮುದಾಯಕ್ಕೆ ₹ 250 ಕೋಟಿ ಮೀಸಲಿಡಬೇಕು ಎಂದು ಕೋರಿದ್ದಾರೆ.</p>.<p>ಸಮುದಾಯದ ಕುಲ ಪುರುಷ ಮೇದಾರ ಕೇತೇಶ್ವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಬೇಕು. ಸಮುದಾಯದ ಬಹುತೇಕರು ಅರಣ್ಯ ಅಂಚಿನ ಆದಿವಾಸಿಗಳಾಗಿದ್ದು, ಪೌಷ್ಟಿಕ ಆಹಾರದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ, ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>