ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ ಜಿಲ್ಲೆಯಲ್ಲಿ ಮಾರ್ಚ್‌ 27 ರಂದು ಮೆಗಾ ಲೋಕ ಅದಾಲತ್

‘ಅದಾಲತ್‍ನಲ್ಲಿ ಪ್ರಕರಣ ಬಗೆಹರಿಸಿಕೊಂಡಲ್ಲಿ ಸಮಯ, ಹಣ ಉಳಿತಾಯ: ನ್ಯಾ.ಶ್ರೀಧರ್
Last Updated 21 ಫೆಬ್ರುವರಿ 2021, 16:35 IST
ಅಕ್ಷರ ಗಾತ್ರ

ಯಾದಗಿರಿ: ‘ಮಾರ್ಚ್ 27 ರಂದು ಮೆಗಾ ಲೋಕ ಅದಾಲತ್ ನಡೆಯಲಿದ್ದು, ಕಕ್ಷಿದಾರರು ಮೆಗಾ ಲೋಕ ಅದಾಲತ್‍ನಲ್ಲಿ ಭಾಗಿಯಾಗಿ ಸದುಪಯೋಗಪಡಿಸಿಕೊಳ್ಳುವಂತೆ’ ಜಿಲ್ಲಾ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಶ್ರೀಧರ್ ಸಲಹೆ ನೀಡಿದರು.

‘ಮೋಟರ್ ವಾಹನ ಅಪಘಾತ ಪರಿಹಾರ, ಭೂ ಸ್ವಾಧೀನ, ವಿದ್ಯುತ್ ಮಂಡಳಿ, ಬ್ಯಾಂಕ್ ಸಂಬಂಧಿಸಿದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣ, ವೈವಾಹಿಕ ಅಥವಾ ಜೀವನಾಂಶ ಪ್ರಕರಣಗಳು ಸೇರಿದಂತೆ ಕಾನೂನಿನನ್ವಯ ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಮಾ.27 ರಂದು ಮೆಗಾ ಅದಾಲತ್‍ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು’ ಎಂದು ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಯಾದಗಿರಿ ನ್ಯಾಯಾಲಯದ ಸಂಕೀರ್ಣದಲ್ಲಿ 3 ಬೆಂಚ್‍ಗಳು, ಶಹಾಪುರ 2 ಹಾಗೂ ಸುರಪುರದಲ್ಲಿ 3 ಬೆಂಚ್‍ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಪ್ರತಿ ಬೆಂಚ್‍ನಲ್ಲಿ ಒಬ್ಬರು ನ್ಯಾಯಾಧೀಶರು ಹಾಗೂ ಒಬ್ಬರು ವಕೀಲರು ಸಂಧಾನಕಾರರು ಭಾಗವಹಿಸಿ ಅವರ ಮುಖಾಂತರ ರಾಜಿ-ಸಂಧಾನ ಮಾಡಿಸಲಾಗುವುದು’ ಎಂದು ತಿಳಿಸಿದರು.

‘ಅದಾಲತ್‍ನಲ್ಲಿ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ಸಾಕಷ್ಟು ಸಮಯ ಮತ್ತು ಹಣ ಉಳಿತಾಯ ಮಾಡಬಹುದಾಗಿದೆ. ಸಿವಿಲ್ ಪ್ರಕರಣಗಳಲ್ಲಿ ರಾಜಿಯಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕ ವಾಪಸ್ಸಾಗುತ್ತದೆ. ಇದರಿಂದ ಉಭಯ ಕಕ್ಷಿದಾರರಲ್ಲಿ ದ್ವೇಷದ ಭಾವನೆ ಕಡಿಮೆಯಾಗಿ ಸಾಮರಸ್ಯ ಮೂಡಿಸಲು ಸಹಕಾರಿಯಾಗಿದೆ’ ಎಂದು ಹೇಳಿದರು.

ಇದೇ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೋಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT