<p><strong>ಸುರಪುರ</strong>: ತಾಲ್ಲೂಕಿನಲ್ಲಿ ವಲಸೆ ಕಾರ್ಮಿಕರ ಸಂಖ್ಯೆ ಅಧಿಕವಾಗಿದೆ. ಕಾರ್ಮಿಕರ ವಲಸೆ ತಪ್ಪಿಸಲು ನರೇಗಾ ಯೋಜನೆ ನೆರವಿಗೆ ಬರುತ್ತಿಲ್ಲ. ವಲಸೆ ಕಾರ್ಮಿಕರ ಮನವೊಲಿಸಲು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ.</p>.<p>ಅಂದಾಜಿನ ಪ್ರಕಾರ ತಾಲ್ಲೂಕಿನಲ್ಲಿ 20 ಸಾವಿರಕ್ಕೂ ಹೆಚ್ಚು ವಲಸೆ ಕಾರ್ಮಿಕರಿದ್ದಾರೆ . ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಆದ ಪ್ರಯುಕ್ತ ವಲಸೆ ಕಾರ್ಮಿಕರಿಗೆ ಕೆಲಸವಿಲ್ಲದಾಯಿತು. ಇನ್ನೊಂದೆಡೆ ಕೊರೊನಾ ವೈರಸ್ ಭೀತಿ. ಹೀಗಾಗಿ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಮರಳಿದರು.</p>.<p>ಕ್ವಾರಂಟೈನ್ಗೆ ಒಳಗಾಗಿ ಅವಲೋಕನ ಅವಧಿ ಮುಗಿಸಿದ ಮತ್ತು ಸೋಂಕಿಗೆ ತುತ್ತಾಗಿ ಗುಣಮುಖರಾದ ವಲಸೆ ಕಾರ್ಮಿಕರು ಮತ್ತೆ ದೊಡ್ಡ ನಗರಗಳತ್ತ ಮುಖ ಮಾಡಿರುವುದು ಅಧಿಕಾರಿಗಳನ್ನು ಚಿಂತೆಗೀಡು ಮಾಡಿದೆ.</p>.<p>ದೊಡ್ಡ ನಗರಗಳಲ್ಲಿ ವರ್ಷವಿಡಿ ಕೆಲಸ. ದಿನಕ್ಕೆ ₹ 600 ರಿಂದ 800 ಕೂಲಿ, ಕೆಲವೆಡೆ ಊಟ, ವಸತಿ ವ್ಯವಸ್ಥೆ, ಲಕ್ಷಕ್ಕೂ ಹೆಚ್ಚು ಮುಂಗಡ ಹಣ ಇವೆಲ್ಲವೂ ವಲಸೆ ಕಾರ್ಮಿಕರನ್ನು ಆಕರ್ಷಿಸುತ್ತಿವೆ.</p>.<p>‘ನರೇಗಾ ಯೋಜನೆಯಲ್ಲಿ ದಿನಕ್ಕೆ ₹ 275 ಮಾತ್ರ ಕೂಲಿ ದೊರಕುತ್ತದೆ. ಅದೂ 100 ದಿನ ಮಾತ್ರ ಕೆಲಸ. ಹೀಗಾಗಿ ನರೇಗಾ ಕೆಲಸಕ್ಕೆ ಕಾರ್ಮಿಕರು ಬರುತ್ತಿಲ್ಲ’ ಎಂಬುದು ಜನರ ಅನಿಸಿಕೆ.</p>.<p>‘ವಲಸೆ ಹೋಗುವುದರಿಂದ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಬಸ್ನಿಲ್ದಾಣ, ಕ್ವಾರಂಟೈನ್ ಕೇಂದ್ರ ಇತರ ಕಾರ್ಮಿಕರು ಇರುವ ಪ್ರದೇಶದಲ್ಲಿ ಪ್ರಚಾರ ಮಾಡಲಾಗಿದೆ. ನರೇಗಾ ಯೋಜನೆಯಲ್ಲಿ ಎಲ್ಲರಿಗೂ ಕೆಲಸ ಕೊಡಲಾಗುವುದು ಎಂದು ತಿಳಿಸಲಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಹೇಳಿದರು.</p>.<p>‘ತಾಲ್ಲೂಕಿನಲ್ಲಿ 23 ಗ್ರಾಮ ಪಂಚಾಯಿತಿಗಳಿವೆ. ಬದು ನಿರ್ಮಾಣ, ಕೆರೆ ಹೂಳು ಎತ್ತುವುದು, ಕೃಷಿ ಹೊಂಡ, ಮಳೆ ನೀರು ಕೊಯ್ಲು ಇತರ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಯಂತ್ರೋಪಕರಣಗಳ ಬಳಕೆ ಮಾಡುತ್ತಿಲ್ಲ’ ಎನ್ನುತ್ತಾರೆ ಅವರು.</p>.<p>‘ದೊಡ್ಡ ನಗರಗಳಲ್ಲಿ ಹೆಚ್ಚು ಸಮಯ ಕೆಲಸ ತೆಗೆದುಕೊಳ್ಳುತ್ತಾರೆ. ಇದರಿಂದ ಆರೋಗ್ಯ ಸಮಸ್ಯೆ, ಮಕ್ಕಳಿಗೆ ಶಿಕ್ಷಣ ಸಮಸ್ಯೆ ಉಂಟಾಗುತ್ತದೆ. ತಮ್ಮ ಹೊಲಗಳಲ್ಲಿಯೆ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಈಗ ಸರಾಸರಿ ಪ್ರತಿ ದಿನ 5 ಸಾವಿರ ಕಾರ್ಮಿಕರಿಗೆ ಕೆಲಸ ನೀಡಲಾಗುತ್ತಿದೆ’ ಎಂದು ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ವಿಶ್ವನಾಥ ಯಾದಗಿರಿಕರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ತಾಲ್ಲೂಕಿನಲ್ಲಿ ವಲಸೆ ಕಾರ್ಮಿಕರ ಸಂಖ್ಯೆ ಅಧಿಕವಾಗಿದೆ. ಕಾರ್ಮಿಕರ ವಲಸೆ ತಪ್ಪಿಸಲು ನರೇಗಾ ಯೋಜನೆ ನೆರವಿಗೆ ಬರುತ್ತಿಲ್ಲ. ವಲಸೆ ಕಾರ್ಮಿಕರ ಮನವೊಲಿಸಲು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ.</p>.<p>ಅಂದಾಜಿನ ಪ್ರಕಾರ ತಾಲ್ಲೂಕಿನಲ್ಲಿ 20 ಸಾವಿರಕ್ಕೂ ಹೆಚ್ಚು ವಲಸೆ ಕಾರ್ಮಿಕರಿದ್ದಾರೆ . ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಆದ ಪ್ರಯುಕ್ತ ವಲಸೆ ಕಾರ್ಮಿಕರಿಗೆ ಕೆಲಸವಿಲ್ಲದಾಯಿತು. ಇನ್ನೊಂದೆಡೆ ಕೊರೊನಾ ವೈರಸ್ ಭೀತಿ. ಹೀಗಾಗಿ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಮರಳಿದರು.</p>.<p>ಕ್ವಾರಂಟೈನ್ಗೆ ಒಳಗಾಗಿ ಅವಲೋಕನ ಅವಧಿ ಮುಗಿಸಿದ ಮತ್ತು ಸೋಂಕಿಗೆ ತುತ್ತಾಗಿ ಗುಣಮುಖರಾದ ವಲಸೆ ಕಾರ್ಮಿಕರು ಮತ್ತೆ ದೊಡ್ಡ ನಗರಗಳತ್ತ ಮುಖ ಮಾಡಿರುವುದು ಅಧಿಕಾರಿಗಳನ್ನು ಚಿಂತೆಗೀಡು ಮಾಡಿದೆ.</p>.<p>ದೊಡ್ಡ ನಗರಗಳಲ್ಲಿ ವರ್ಷವಿಡಿ ಕೆಲಸ. ದಿನಕ್ಕೆ ₹ 600 ರಿಂದ 800 ಕೂಲಿ, ಕೆಲವೆಡೆ ಊಟ, ವಸತಿ ವ್ಯವಸ್ಥೆ, ಲಕ್ಷಕ್ಕೂ ಹೆಚ್ಚು ಮುಂಗಡ ಹಣ ಇವೆಲ್ಲವೂ ವಲಸೆ ಕಾರ್ಮಿಕರನ್ನು ಆಕರ್ಷಿಸುತ್ತಿವೆ.</p>.<p>‘ನರೇಗಾ ಯೋಜನೆಯಲ್ಲಿ ದಿನಕ್ಕೆ ₹ 275 ಮಾತ್ರ ಕೂಲಿ ದೊರಕುತ್ತದೆ. ಅದೂ 100 ದಿನ ಮಾತ್ರ ಕೆಲಸ. ಹೀಗಾಗಿ ನರೇಗಾ ಕೆಲಸಕ್ಕೆ ಕಾರ್ಮಿಕರು ಬರುತ್ತಿಲ್ಲ’ ಎಂಬುದು ಜನರ ಅನಿಸಿಕೆ.</p>.<p>‘ವಲಸೆ ಹೋಗುವುದರಿಂದ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಬಸ್ನಿಲ್ದಾಣ, ಕ್ವಾರಂಟೈನ್ ಕೇಂದ್ರ ಇತರ ಕಾರ್ಮಿಕರು ಇರುವ ಪ್ರದೇಶದಲ್ಲಿ ಪ್ರಚಾರ ಮಾಡಲಾಗಿದೆ. ನರೇಗಾ ಯೋಜನೆಯಲ್ಲಿ ಎಲ್ಲರಿಗೂ ಕೆಲಸ ಕೊಡಲಾಗುವುದು ಎಂದು ತಿಳಿಸಲಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಹೇಳಿದರು.</p>.<p>‘ತಾಲ್ಲೂಕಿನಲ್ಲಿ 23 ಗ್ರಾಮ ಪಂಚಾಯಿತಿಗಳಿವೆ. ಬದು ನಿರ್ಮಾಣ, ಕೆರೆ ಹೂಳು ಎತ್ತುವುದು, ಕೃಷಿ ಹೊಂಡ, ಮಳೆ ನೀರು ಕೊಯ್ಲು ಇತರ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಯಂತ್ರೋಪಕರಣಗಳ ಬಳಕೆ ಮಾಡುತ್ತಿಲ್ಲ’ ಎನ್ನುತ್ತಾರೆ ಅವರು.</p>.<p>‘ದೊಡ್ಡ ನಗರಗಳಲ್ಲಿ ಹೆಚ್ಚು ಸಮಯ ಕೆಲಸ ತೆಗೆದುಕೊಳ್ಳುತ್ತಾರೆ. ಇದರಿಂದ ಆರೋಗ್ಯ ಸಮಸ್ಯೆ, ಮಕ್ಕಳಿಗೆ ಶಿಕ್ಷಣ ಸಮಸ್ಯೆ ಉಂಟಾಗುತ್ತದೆ. ತಮ್ಮ ಹೊಲಗಳಲ್ಲಿಯೆ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಈಗ ಸರಾಸರಿ ಪ್ರತಿ ದಿನ 5 ಸಾವಿರ ಕಾರ್ಮಿಕರಿಗೆ ಕೆಲಸ ನೀಡಲಾಗುತ್ತಿದೆ’ ಎಂದು ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ವಿಶ್ವನಾಥ ಯಾದಗಿರಿಕರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>