ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರ ಕಾಯ್ದುಕೊಳ್ಳಲು ಸಚಿವ ಪ್ರಭು ಚವ್ಹಾಣ ಮನವಿ

ಯಾದಗಿರಿ ಜಿಲ್ಲೆಯಲ್ಲಿ ಮೊದಲ ಪಾಸಿಟಿವ್ ಪ್ರಕರಣಗಳು ಪತ್ತೆ
Last Updated 12 ಮೇ 2020, 16:32 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಉತ್ತಮ ರೀತಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಸ್ತುತ ಲಾಕ್‍ಡೌನ್ ಸಡಿಲಿಕೆಯಿಂದಾಗಿ ಬೇರೆಬೇರೆ ರಾಜ್ಯಗಳಿಂದ ಜನರು ಜಿಲ್ಲೆಗೆ ಮರಳಿ ಬರುತ್ತಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಎರಡು ಕೊರೊನಾ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಜನತೆ ಜಾಗರೂಕರಾಗಿ ಅಂತರ ಕಾಯ್ದುಕೊಳ್ಳಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಮನವಿ ಮಾಡಿದ್ದಾರೆ.

ಸಾರ್ವಜನಿಕರ ಸಹಕಾರ ಅಗತ್ಯ:ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಹೊರರಾಜ್ಯಗಳಿಂದ ಆಗಮಿಸುತ್ತಿರುವ ವಲಸೆಗಾರರು ಕಡ್ಡಾಯವಾಗಿ 14 ದಿನಗಳ ಕ್ವಾರಂಟೈನ್‍ಗೆ ಒಳಪಡಬೇಕಾಗುತ್ತದೆ. ಯಾರಾದರೂ ಬೇರೆ ರಾಜ್ಯಗಳಿಂದ ವಲಸೆ ಬಂದಿರುವುದು ಕಂಡುಬಂದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಯಾರೂ ಸ್ವಗ್ರಾಮಕ್ಕೆ ಹೋಗಬಾರದು. ಒಂದು ವೇಳೆ ಅಂಥವರು ಯಾರಾದರೂ ಕಂಡುಬಂದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರುವಂತೆ ಸಚಿವರು ಕೋರಿದ್ದಾರೆ.

ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತರು, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲರೂ ಉತ್ತಮ ರೀತಿಯಿಂದ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿಗಳು ನೀಡುವ ಪ್ರತಿಯೊಂದು ಆದೇಶ ಪಾಲಿಸಬೇಕು. ಎಲ್ಲರೂ ತಮ್ಮತಮ್ಮ ಮನೆಯಲ್ಲಿಯೇ ಇರಬೇಕು. ಅನವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡಬಾರದು. ಪ್ರತಿಯೊಂದು ಚೆಕ್‌ಪೋಸ್ಟ್‌ಗಳಲ್ಲಿ ಕಡ್ಡಾಯವಾಗಿ ತಪಾಸಣೆಗೆ ಒಳಗಾಗಬೇಕು. ಜಿಲ್ಲೆಯ ಎಲ್ಲಾ ಶಾಸಕರು, ಜನಪ್ರತಿನಿಧಿಗಳು ಉತ್ತಮ ರೀತಿಯಿಂದ ಸಹಕಾರ ನೀಡುತ್ತಿದ್ದಾರೆ. ಜನರ ಸಹಕಾರವೂ ಮುಖ್ಯವಾಗಿದ್ದು, ಕೊರೊನಾ ಮುಕ್ತ ಜಿಲ್ಲೆಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT