ಕಲ್ಯಾಣ ಕರ್ನಾಟಕದ ಅದರಲ್ಲೂ ಕಲಬುರಗಿ, ರಾಯಚೂರ, ಯಾದಗಿರಿ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾದ ಹತ್ತಿಯನ್ನು ಮಾರಾಟ ಮಾಡಲು ಪ್ರತಿ ವರ್ಷ ಈ ಭಾಗದ ರೈತರು ಹರ ಸಾಹಸ ಪಡುತ್ತಿದ್ದರು. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ಭಾಗದ ಹಲವು ಖಾಸಗಿ ಹತ್ತಿ ಕಾರ್ಖಾನೆಗಳ ಜೊತೆ ಸರ್ಕಾರ ಕೈಜೋಡಿಸಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಬೆಂಬಲ ನೀಡಿ ಹತ್ತಿ ಖರೀದಿ ಮಾರಾಟಕ್ಕೆ ಅನುಮತಿ ನೀಡಲಾಗಿದೆ ಎಂದು ಹೇಳಿದರು. ಭಿ.ಗುಡಿ, ಗೋಗಿ, ಹದನೂರ ಸೇರಿದಂತೆ ಜಿಲ್ಲೆಯಲ್ಲಿ ಹಲವು ಖಾಸಗಿ ಹತ್ತಿ ಕಾರ್ಖಾನೆಗಳಲ್ಲಿ ರೈತರಿಂದ ನೇರವಾಗಿ ಹತ್ತಿ ಖರೀದಿಗೆ ವ್ಯವಸ್ಥೆ ಮಾಡಿದ್ದು ರೈತರು ಇದರ ಲಾಭ ಪಡೆಯುವಂತೆ ಹೇಳಿದರು.