ಈ ಕುರಿತು ಮಾತನಾಡಿದ ಅವರು, ನಗರದ ದಿಗ್ಗಿ ಅಗಸಿ ಶಿಥಿಲಗೊಂಡು ಅಗಸಿಯ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಆದರೆ ದಿಗ್ಗಿ ಅಗಸಿ ದುರಸ್ತಿ ಕಾರ್ಯದ ಕುರಿತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹಾಗೂ ಪುರಾತತ್ವ ಇಲಾಖೆಯೊಂದಿಗೆ ಮಾತನಾಡಿ ದುರಸ್ತಿ ಕಾಮಗಾರಿಗಾಗಿ ₹ 90 ಲಕ್ಷ ಅನುದಾನ ಕಲ್ಪಿಸುವಂತೆ ಪತ್ರ ಬರೆಯಲಾಗಿದೆ. ಒಂದು ವೇಳೆ ಹಣಕಾಸಿನ ಅನುದಾನ ಕಲ್ಪಿಸಲು ಸಾಧ್ಯವಾಗದಿದ್ದಲ್ಲಿ ಕೆಕೆಆರ್ಡಿಬಿ ಅನುದಾನದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲು ಅನುಮತಿ ನೀಡಬೇಕೆಂದು ಕೋರಲಾಗಿದೆ ಎಂದು ಮಾಹಿತಿ ನೀಡಿದರು.