ಮಳೆಗಾಲ ಆರಂಭವಾದ್ದರಿಂದ ಮಲೇರಿಯಾ, ಡೆಂಗಿ ಸೇರಿದಂತೆ ನಾನಾ ಕಾಯಿಲೆಗಳು ಉಲ್ಬಣಿಸುವ ಸಾಧ್ಯತೆಗಳಿವೆ. ಹಾಗೆಯೇ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮತ್ತು ಎಲ್ಲ ಗ್ರಾಮಗಳಲ್ಲೂ ತುಂಬಿಕೊಂಡಿರುವ ಚರಂಡಿಗಳನ್ನು ಸ್ಚಚ್ಛಗೊಳಿಸಬೇಕು. ರಸ್ತೆಗಳನ್ನು ಸ್ವಚ್ಛಗೊಳಿಸಿ ವಿದ್ಯುತ್ ದೀಪಗಳನ್ನು ಅಳವಡಿಸಬೇಕು. ನಗರದೆಲ್ಲೆಡೆ ಫಾಗಿಂಗ್ ಮತ್ತು ಸ್ಯಾನಿಟೈಸಿಂಗ್ ಮಾಡುವುದು, ಬ್ಲೀಚಿಂಗ್ ಸಿಂಪಡಿಸುವ ಕಾರ್ಯ ಚುರುಕುಗೊಳಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.