ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

Last Updated 17 ಏಪ್ರಿಲ್ 2018, 11:35 IST
ಅಕ್ಷರ ಗಾತ್ರ

ಯಾದಗಿರಿ: 2018–19ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯು ನಗರದ ಐದು ಕೇಂದ್ರಗಳಲ್ಲಿ ಏ.18ಮತ್ತು 19ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಆದೇಶಿಸಿದ್ದಾರೆ.

ಈ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್‌ಟಿಡಿ, ಮೊಬೈಲ್, ಪೇಜರ್, ಜೆರಾಕ್ಸ್, ಟೈಪಿಂಗ್, ಪುಸ್ತಕ ಮಳಿಗೆಗಳು ಮುಂತಾದವುಗಳನ್ನು ನಿಷೇಧಿಸಲಾಗಿದೆ.

ಕೇಂದ್ರಗಳಲ್ಲಿ ನಿಗದಿಪಡಿಸಿದ ಅಧಿಕಾರಿ, ಶಿಕ್ಷಕರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಗಿ ಇಲ್ಲದೇ ಪ್ರವೇಶ ಇರುವುದಿಲ್ಲ. ಕೇಂದ್ರದ ಸುತ್ತ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವಂತಿಲ್ಲ. ನ್ಯೂ ಕನ್ನಡ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರವು ಭಾಗ್ಯಲಕ್ಷ್ಮಿ ಚಿತ್ರಮಂದಿರಕ್ಕೆ ಹೊಂದಿಕೊಂಡಿರು ವುದರಿಂದ ಈ ಎರಡು ದಿನ ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಪ್ರದರ್ಶನ ನಿಷೇಧಿಸಲಾಗಿದೆ.

ಜವಾಹರ ಪದವಿ ಪೂರ್ವ ಕಾಲೇಜು ಕೇಂದ್ರ ಬಾಲಾಜಿ ಕಲ್ಯಾಣ ಮಂಟಪಕ್ಕೆ ಹೊಂದಿಕೊಂಡಿದ್ದು, ಈ ಸಮಯದಲ್ಲಿ ಧ್ವನಿವರ್ಧಕ ಬಳಸಬಾರದು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ತ್ರಿಸದಸ್ಯ ಸಮಿತಿ ನೇಮಕ:  ಸಿಇಟಿ ನಿಮಿತ್ತ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಮಟ್ಟದ ತ್ರಿಸದಸ್ಯ ಸಮಿತಿ ನೇಮಕ ಮಾಡಲಾಗಿದೆ. ತಹಶೀಲ್ದಾರ್ ಮಲ್ಲೇಶ್ ತಂಗಾ, ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಿಣಜಿಗಿ ಗುರುಲಿಂಗಪ್ಪ ಅವರು ಸಮಿತಿಯಲ್ಲಿ ಇದ್ದಾರೆ.

ವೀಕ್ಷಕರ ನೇಮಕ: ಯಾದಗಿರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ (ಬಾಲಕರ) ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಜನಿಕಾಂತ ಚವ್ಹಾಣ, ನ್ಯೂ ಕನ್ನಡ ಪದವಿ ಪೂರ್ವ ಕಾಲೇಜಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುಬ್ರಾನಾಯಕ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಜಂಟಿ ಕೃಷಿ ನಿರ್ದೇಶಕರಾದ ದೇವಿಕಾ, ಡಾನ್ ಬಾಸ್ಕೊ ಪದವಿ ಪೂರ್ವ ಕಾಲೇಜಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಇಲಾಖೆ ಜಿಲ್ಲಾ ಅಂಕಿತ ಅಧಿಕಾರಿ ಡಾ.ಲಕ್ಷ್ಮಿಕಾಂತ, ಜವಾಹರ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಸಹಾಯಕ ಕೃಷಿ ನಿರ್ದೇಶಕ ವೀರಶೆಟ್ಟಿ ಅವರನ್ನು ವೀಕ್ಷಕರಾಗಿ ಜಿಲ್ಲಾಧಿಕಾರಿ ಜೆ.ಮಂಜುನಾಥ ಅವರು ನೇಮಕ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT