ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ. ಕಳೆದ ಆರು ವರ್ಷದಿಂದ ಅಧಿಕಾರ ಅನುಭವಿಸಿದ ಬಿಜೆಪಿ ಅಭ್ಯರ್ಥಿ ಒಂದು ಸಲವು ಗ್ರಾಮ ಪಂಚಾಯಿತಿ ಸಮಸ್ಯೆಗಳ ಬಗ್ಗೆ ಸ್ಪಂದಿಸಲಿಲ್ಲ. ಶಾಸಕ ನಿಧಿಯನ್ನು ಕೇವಲ, ಮಂದಿರ, ಸಮುದಾಯ ಭವನ ಮುಂತಾದವುಗಳಿಗೆ ನೀಡಿದರು. ಆದರೆ ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ಅನುದಾನ ಒದಗಿಸಲಿಲ್ಲ ಎಂದು ಅವರು ತಿಳಿಸಿದರು.