<p><strong>ಯಾದಗಿರಿ:</strong> ‘ಜಗದ್ಗುರು ರೇಣುಕಾಚಾರ್ಯರು ವೀರಶೈವ ಧರ್ಮದ ಮಹಾನ್ ಶರಣರಾಗಿದ್ದು, ಅವರ ತತ್ವ ಸಿದ್ಧಾಂತಗಳು ಅನುಕರಣೀಯ’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು.</p>.<p>ನಗರದ ಲಕ್ಷ್ಮಿ ದೇವಸ್ಥಾನದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಗದ್ಗುರು ರೇಣುಕಾಚಾರ್ಯರ ಜಯಂತ್ಯುತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ರೇಣುಕಾಚಾರ್ಯರು ಋಷಿಗಳ ಜೊತೆಯಲ್ಲಿ ನಿರಂತರ ಜ್ಞಾನಸಾಧನೆ ಮಾಡಿ, ಶೈವ ತತ್ವಗಳನ್ನು ಆಳವಾಗಿ ಅಧ್ಯಯನ ಮಾಡಿದ್ದರು. ಹೀಗಾಗಿ, ಅವರ ಧಾರ್ಮಿಕ ಸಾಧನೆಗಳು ದೇಶದಲ್ಲಿ ಮಹತ್ವಪೂರ್ಣ ಸ್ಥಾನ ಪಡೆದಿವೆ. ಅವರ ತತ್ವಾದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು’ ಎಂದರು.</p>.<p>ವಿಶೇಷ ಉಪನ್ಯಾಸ ನೀಡಿದ ಉಪನ್ಯಾಸಕಿ ಜ್ಯೋತಿ ಲತಾ ತಡಿಬಿಡಿ ಮಠ, ‘ರೇಣುಕಾಚಾರ್ಯರು ಶೈವ ತತ್ವಶಾಸ್ತ್ರವನ್ನು ಜನಸಾಮಾನ್ಯರಿಗೆ ತಲುಪಿಸಿ, ಅದನ್ನು ದೈನಂದಿನ ಜೀವನದ ಭಾಗವನ್ನಾಗಿ ಮಾಡಲು ಶ್ರಮಿಸಿದರು. ಇಷ್ಟಲಿಂಗ ಧಾರಣೆಯ ಮೂಲಕ ಭಗವಂತನನ್ನು ವೈಯಕ್ತಿಕ ಅನುಭವದ ಮೂಲಕ ಅರಿತುಕೊಳ್ಳಬೇಕು ಎಂಬ ತತ್ವವನ್ನು ಪ್ರಚಾರ ಮಾಡಿದ್ದರು’ ಎಂದು ಹೇಳಿದರು.</p>.<p>‘ಅಹಂ ಬ್ರಹ್ಮಾಸ್ಮಿ ಮತ್ತು ಶಿವೋಹಂ ತತ್ವಗಳಿಗೆ ವೀರಶೈವ ಚಿಂತನೆಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡಿದರು. ಅವಮಾನಿತ ವರ್ಗಗಳನ್ನು ಪ್ರೀತಿಸಿ, ಅವರಿಗೆ ತತ್ವಶಾಸ್ತ್ರ ಮತ್ತು ಧಾರ್ಮಿಕ ಶಿಕ್ಷಣವನ್ನು ಕೊಡಿಸಿದರು. ಶೈವ ಸಮುದಾಯವನ್ನು ಶ್ರೇಷ್ಠತೆಯ ಮೇಲ್ಮಟ್ಟಕ್ಕೆ ತರಲು ಶ್ರಮಿಸಿದ್ದರು’ ಎಂದರು.</p>.<p>ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಮಾತನಾಡಿ, ‘ಜಗದ್ಗುರು ರೇಣುಕಾಚಾರ್ಯರ ತತ್ವಗಳು ಪ್ರಸ್ತುತ ಸಮಾಜದ ಸಮಾನತೆ, ಧಾರ್ಮಿಕ ಸಾಮರಸ್ಯ ಮತ್ತು ಆಧ್ಯಾತ್ಮಿಕ ಪ್ರಗತಿಗೆ ದಾರಿದೀಪ ಇದ್ದಂತೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಶೈವ ತತ್ವಗಳನ್ನು ಜನಸಾಮಾನ್ಯರಿಗೆ ಪರಿಚಯಿಸಿ, ಅದನ್ನು ಜೀವನದ ಭಾಗವನ್ನಾಗಿ ಮಾಡಿದ ಮಹಾನ್ ಶರಣರು ರೇಣುಕಾಚಾರ್ಯರು. ಅವರ ಬದುಕು ಮತ್ತು ತತ್ವಗಳು ಕನ್ನಡ ಮಾತ್ರವಲ್ಲ, ವಿಶ್ವದಲ್ಲಿ ಪ್ರಾಮುಖ್ಯತೆ ಪಡೆದಿವೆ’ ಎಂದರು.</p>.<p>ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ರೇಣುಕಾಚಾರ್ಯ ಭಾವಚಿತ್ರದ ಮೆರವಣಿಗೆ ಮಾಡಲಾಯಿತು.</p>.<p>ಕಾರ್ಯಕ್ರಮದಲ್ಲಿ ಕೌಳೂರು ಮಠದ ಸಿದ್ದರಾಮ ದೇವರು, ಕಡೆಚೂರಿನ ಗುರುಮೂರ್ತಿ, ಅಬ್ಬೆ ತುಮಕೂರಿನ ಶಿವಶೇಖರ ಶಿವಾಚಾರ್ಯ, ‘ಯುಡಾ’ ಅಧ್ಯಕ್ಷ ಬಾಬುರಾವ ಕಾಡ್ಲೂರ್, ತಹಶೀಲ್ದಾರ್ ಸುರೇಶ ಅಂಕಲಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಲಕ್ಷ್ಮಿ ದೇವಸ್ಥಾನದ ಅಧ್ಯಕ್ಷ ಸದಾಶಿವಪ್ಪ ಚಂದನಕೇರಾ, ಜಂಗಮ ಸಮಾಜದ ಅಧ್ಯಕ್ಷ ಚನ್ನವೀರಯ್ಯ ಸ್ವಾಮಿ ಕೌಳ್ಳೂರು, ಪ್ರಮುಖರಾದ ಮಲ್ಲಣ್ಣಗೌಡ ಕೌಳ್ಳೂರು, ಮಹೇಶ ಸ್ವಾಮಿ, ವಿಶ್ವನಾಥಯ್ಯ ನಾಯ್ಕಲ್ ಸೇರಿದಂತೆ ಇತರರ ಉಪಸ್ಥಿತರಿದ್ದರು.</p>
<p><strong>ಯಾದಗಿರಿ:</strong> ‘ಜಗದ್ಗುರು ರೇಣುಕಾಚಾರ್ಯರು ವೀರಶೈವ ಧರ್ಮದ ಮಹಾನ್ ಶರಣರಾಗಿದ್ದು, ಅವರ ತತ್ವ ಸಿದ್ಧಾಂತಗಳು ಅನುಕರಣೀಯ’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು.</p>.<p>ನಗರದ ಲಕ್ಷ್ಮಿ ದೇವಸ್ಥಾನದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಗದ್ಗುರು ರೇಣುಕಾಚಾರ್ಯರ ಜಯಂತ್ಯುತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ರೇಣುಕಾಚಾರ್ಯರು ಋಷಿಗಳ ಜೊತೆಯಲ್ಲಿ ನಿರಂತರ ಜ್ಞಾನಸಾಧನೆ ಮಾಡಿ, ಶೈವ ತತ್ವಗಳನ್ನು ಆಳವಾಗಿ ಅಧ್ಯಯನ ಮಾಡಿದ್ದರು. ಹೀಗಾಗಿ, ಅವರ ಧಾರ್ಮಿಕ ಸಾಧನೆಗಳು ದೇಶದಲ್ಲಿ ಮಹತ್ವಪೂರ್ಣ ಸ್ಥಾನ ಪಡೆದಿವೆ. ಅವರ ತತ್ವಾದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು’ ಎಂದರು.</p>.<p>ವಿಶೇಷ ಉಪನ್ಯಾಸ ನೀಡಿದ ಉಪನ್ಯಾಸಕಿ ಜ್ಯೋತಿ ಲತಾ ತಡಿಬಿಡಿ ಮಠ, ‘ರೇಣುಕಾಚಾರ್ಯರು ಶೈವ ತತ್ವಶಾಸ್ತ್ರವನ್ನು ಜನಸಾಮಾನ್ಯರಿಗೆ ತಲುಪಿಸಿ, ಅದನ್ನು ದೈನಂದಿನ ಜೀವನದ ಭಾಗವನ್ನಾಗಿ ಮಾಡಲು ಶ್ರಮಿಸಿದರು. ಇಷ್ಟಲಿಂಗ ಧಾರಣೆಯ ಮೂಲಕ ಭಗವಂತನನ್ನು ವೈಯಕ್ತಿಕ ಅನುಭವದ ಮೂಲಕ ಅರಿತುಕೊಳ್ಳಬೇಕು ಎಂಬ ತತ್ವವನ್ನು ಪ್ರಚಾರ ಮಾಡಿದ್ದರು’ ಎಂದು ಹೇಳಿದರು.</p>.<p>‘ಅಹಂ ಬ್ರಹ್ಮಾಸ್ಮಿ ಮತ್ತು ಶಿವೋಹಂ ತತ್ವಗಳಿಗೆ ವೀರಶೈವ ಚಿಂತನೆಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡಿದರು. ಅವಮಾನಿತ ವರ್ಗಗಳನ್ನು ಪ್ರೀತಿಸಿ, ಅವರಿಗೆ ತತ್ವಶಾಸ್ತ್ರ ಮತ್ತು ಧಾರ್ಮಿಕ ಶಿಕ್ಷಣವನ್ನು ಕೊಡಿಸಿದರು. ಶೈವ ಸಮುದಾಯವನ್ನು ಶ್ರೇಷ್ಠತೆಯ ಮೇಲ್ಮಟ್ಟಕ್ಕೆ ತರಲು ಶ್ರಮಿಸಿದ್ದರು’ ಎಂದರು.</p>.<p>ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಮಾತನಾಡಿ, ‘ಜಗದ್ಗುರು ರೇಣುಕಾಚಾರ್ಯರ ತತ್ವಗಳು ಪ್ರಸ್ತುತ ಸಮಾಜದ ಸಮಾನತೆ, ಧಾರ್ಮಿಕ ಸಾಮರಸ್ಯ ಮತ್ತು ಆಧ್ಯಾತ್ಮಿಕ ಪ್ರಗತಿಗೆ ದಾರಿದೀಪ ಇದ್ದಂತೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಶೈವ ತತ್ವಗಳನ್ನು ಜನಸಾಮಾನ್ಯರಿಗೆ ಪರಿಚಯಿಸಿ, ಅದನ್ನು ಜೀವನದ ಭಾಗವನ್ನಾಗಿ ಮಾಡಿದ ಮಹಾನ್ ಶರಣರು ರೇಣುಕಾಚಾರ್ಯರು. ಅವರ ಬದುಕು ಮತ್ತು ತತ್ವಗಳು ಕನ್ನಡ ಮಾತ್ರವಲ್ಲ, ವಿಶ್ವದಲ್ಲಿ ಪ್ರಾಮುಖ್ಯತೆ ಪಡೆದಿವೆ’ ಎಂದರು.</p>.<p>ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ರೇಣುಕಾಚಾರ್ಯ ಭಾವಚಿತ್ರದ ಮೆರವಣಿಗೆ ಮಾಡಲಾಯಿತು.</p>.<p>ಕಾರ್ಯಕ್ರಮದಲ್ಲಿ ಕೌಳೂರು ಮಠದ ಸಿದ್ದರಾಮ ದೇವರು, ಕಡೆಚೂರಿನ ಗುರುಮೂರ್ತಿ, ಅಬ್ಬೆ ತುಮಕೂರಿನ ಶಿವಶೇಖರ ಶಿವಾಚಾರ್ಯ, ‘ಯುಡಾ’ ಅಧ್ಯಕ್ಷ ಬಾಬುರಾವ ಕಾಡ್ಲೂರ್, ತಹಶೀಲ್ದಾರ್ ಸುರೇಶ ಅಂಕಲಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಲಕ್ಷ್ಮಿ ದೇವಸ್ಥಾನದ ಅಧ್ಯಕ್ಷ ಸದಾಶಿವಪ್ಪ ಚಂದನಕೇರಾ, ಜಂಗಮ ಸಮಾಜದ ಅಧ್ಯಕ್ಷ ಚನ್ನವೀರಯ್ಯ ಸ್ವಾಮಿ ಕೌಳ್ಳೂರು, ಪ್ರಮುಖರಾದ ಮಲ್ಲಣ್ಣಗೌಡ ಕೌಳ್ಳೂರು, ಮಹೇಶ ಸ್ವಾಮಿ, ವಿಶ್ವನಾಥಯ್ಯ ನಾಯ್ಕಲ್ ಸೇರಿದಂತೆ ಇತರರ ಉಪಸ್ಥಿತರಿದ್ದರು.</p>