<p>ಸುರಪುರ: ಸಚಿವ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿರುವ ವಿಜಯನಗರ ಶಾಸಕ ಆನಂದಸಿಂಗ್ ಅವರ ಮನವೊಲಿಸುವ ಜವಾಬ್ದಾರಿಯನ್ನು ಪಕ್ಷದ ವರಿಷ್ಠರು ಶಾಸಕ ರಾಜೂಗೌಡರಿಗೆ ವಹಿಸಿದ್ದಾರೆ ಎಂದು ತಿಳಿದು ಬಂದಿದೆ.</p>.<p>ರಾಜೂಗೌಡರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೆ ಮಾಡಿ ಆನಂದಸಿಂಗ್ನನ್ನು ಬೆಂಗಳೂರಿಗೆ ಕರೆ ತರಲು ತಿಳಿಸಿದರು.ರಾಜೂಗೌಡರನ್ನು ಕರೆದ್ಯೊಯಲು ಬೆಂಗಳೂರಿನಿಂದ ಹೆಲಿಕಾಪ್ಟರ್ ಬಂದಿತು. ಪಟ್ಟಣದ ಪ್ರವಾಸಿ ಮಂದಿರದ ಹೆಲಿಪ್ಯಾಡ್ನಿಂದ ಹೊಸಪೇಟೆಯ ಜಿಂದಾಲ್ಗೆ ಪಯಣ ಬೆಳೆಸಿದರು.</p>.<p>ಈ ಬಗ್ಗೆ ಮಾತನಾಡಿದ ರಾಜೂಗೌಡ, ‘ಆನಂದಸಿಂಗ್ ಮತ್ತು ನಾನು ಆಪ್ತ ಸ್ನೇಹಿತರು. ಅವರನ್ನು ಬಿಜೆಪಿಗೆ ನಾನೇ ಕರೆ ತಂದಿದ್ದೆ. ವರಿಷ್ಠರ ಸೂಚನೆ ಮೇರೆಗೆ ಉಪಚುನಾವಣೆಯ ಸಂಪೂರ್ಣ ಹೊಣೆ ಹೊತ್ತು ಅವರಿಗೆ ಗೆಲುವು ದೊರಕಿಸಿಕೊಟ್ಟಿದ್ದೆ‘ ಎಂದರು.</p>.<p>‘ಮಂಗಳವಾರದಿಂದ ವರಿ ಷ್ಠರು ಆನಂದಸಿಂಗ್ ಅವರನ್ನು ಸಂಪರ್ಕಿ ಸಲು ಯತ್ನಿಸಿದ್ದರೂ ಸಾಧ್ಯವಾಗಿಲ್ಲ. ಅವರೊಂದಿಗೆ ನನ್ನ ಒಡನಾಟ ಇರುವುದರಿಂದ ವರಿಷ್ಠರು ಈ ಜವಾಬ್ದಾರಿ ನನ್ನ ಮೇಲೆ ಹೊರೆಸಿದ್ದಾರೆ. ನಾನು ಅವರೊಂದಿಗೆ ಮಾತನಾಡಿದ್ದೇನೆ’ ಎಂದು ಹೇಳಿದರು.</p>.<p>‘ಆನಂದಸಿಂಗ್ ಅವರನ್ನು ಬಿ.ಎಸ್. ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಕರೆದುಕೊಂಡು ಹೋಗುತ್ತೇನೆ. ನಿರೀಕ್ಷಿತ ಖಾತೆ ತಪ್ಪಿದ್ದರಿಂದ ಅಸಮಾಧಾ ನಗೊಂಡಿದ್ದಾರೆ. ಅವರ ಮನವೊಲಿಕೆ ಖಂಡಿತವಾಗಿ ಸಾಧ್ಯವಾಗಲಿದೆ’ ಎಂದರು.</p>.<p>‘ನನಗೆ ಸಚಿವ ಸ್ಥಾನ ನೀಡಿದರೂ ಸ್ವೀಕರಿಸುವುದಿಲ್ಲ. ನನ್ನ ನಿರ್ಧಾರ ಅಚಲವಾಗಿ. ಉಳಿದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರುವುದು ನನ್ನ ಗುರಿ. ಆಗ ಸಚಿವನಾಗುತ್ತೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುರಪುರ: ಸಚಿವ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿರುವ ವಿಜಯನಗರ ಶಾಸಕ ಆನಂದಸಿಂಗ್ ಅವರ ಮನವೊಲಿಸುವ ಜವಾಬ್ದಾರಿಯನ್ನು ಪಕ್ಷದ ವರಿಷ್ಠರು ಶಾಸಕ ರಾಜೂಗೌಡರಿಗೆ ವಹಿಸಿದ್ದಾರೆ ಎಂದು ತಿಳಿದು ಬಂದಿದೆ.</p>.<p>ರಾಜೂಗೌಡರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೆ ಮಾಡಿ ಆನಂದಸಿಂಗ್ನನ್ನು ಬೆಂಗಳೂರಿಗೆ ಕರೆ ತರಲು ತಿಳಿಸಿದರು.ರಾಜೂಗೌಡರನ್ನು ಕರೆದ್ಯೊಯಲು ಬೆಂಗಳೂರಿನಿಂದ ಹೆಲಿಕಾಪ್ಟರ್ ಬಂದಿತು. ಪಟ್ಟಣದ ಪ್ರವಾಸಿ ಮಂದಿರದ ಹೆಲಿಪ್ಯಾಡ್ನಿಂದ ಹೊಸಪೇಟೆಯ ಜಿಂದಾಲ್ಗೆ ಪಯಣ ಬೆಳೆಸಿದರು.</p>.<p>ಈ ಬಗ್ಗೆ ಮಾತನಾಡಿದ ರಾಜೂಗೌಡ, ‘ಆನಂದಸಿಂಗ್ ಮತ್ತು ನಾನು ಆಪ್ತ ಸ್ನೇಹಿತರು. ಅವರನ್ನು ಬಿಜೆಪಿಗೆ ನಾನೇ ಕರೆ ತಂದಿದ್ದೆ. ವರಿಷ್ಠರ ಸೂಚನೆ ಮೇರೆಗೆ ಉಪಚುನಾವಣೆಯ ಸಂಪೂರ್ಣ ಹೊಣೆ ಹೊತ್ತು ಅವರಿಗೆ ಗೆಲುವು ದೊರಕಿಸಿಕೊಟ್ಟಿದ್ದೆ‘ ಎಂದರು.</p>.<p>‘ಮಂಗಳವಾರದಿಂದ ವರಿ ಷ್ಠರು ಆನಂದಸಿಂಗ್ ಅವರನ್ನು ಸಂಪರ್ಕಿ ಸಲು ಯತ್ನಿಸಿದ್ದರೂ ಸಾಧ್ಯವಾಗಿಲ್ಲ. ಅವರೊಂದಿಗೆ ನನ್ನ ಒಡನಾಟ ಇರುವುದರಿಂದ ವರಿಷ್ಠರು ಈ ಜವಾಬ್ದಾರಿ ನನ್ನ ಮೇಲೆ ಹೊರೆಸಿದ್ದಾರೆ. ನಾನು ಅವರೊಂದಿಗೆ ಮಾತನಾಡಿದ್ದೇನೆ’ ಎಂದು ಹೇಳಿದರು.</p>.<p>‘ಆನಂದಸಿಂಗ್ ಅವರನ್ನು ಬಿ.ಎಸ್. ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಕರೆದುಕೊಂಡು ಹೋಗುತ್ತೇನೆ. ನಿರೀಕ್ಷಿತ ಖಾತೆ ತಪ್ಪಿದ್ದರಿಂದ ಅಸಮಾಧಾ ನಗೊಂಡಿದ್ದಾರೆ. ಅವರ ಮನವೊಲಿಕೆ ಖಂಡಿತವಾಗಿ ಸಾಧ್ಯವಾಗಲಿದೆ’ ಎಂದರು.</p>.<p>‘ನನಗೆ ಸಚಿವ ಸ್ಥಾನ ನೀಡಿದರೂ ಸ್ವೀಕರಿಸುವುದಿಲ್ಲ. ನನ್ನ ನಿರ್ಧಾರ ಅಚಲವಾಗಿ. ಉಳಿದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರುವುದು ನನ್ನ ಗುರಿ. ಆಗ ಸಚಿವನಾಗುತ್ತೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>