‘ಸಿಡಿಲು, ಮಳೆ, ಗಾಳಿ, ಪ್ರವಾಹ ಅವಘಡಗಳಿಗೆ ಸಿಲುಕಿ ಜಾನುವಾರುಗಳು ಮೃತಪಟ್ಟಲ್ಲಿ ರೈತರು ಚಿಂತಿಸುವ ಅಗತ್ಯವಿಲ್ಲ. ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ತಕ್ಷಣವೇ ಪರಿಹಾರ ನೀಡಲು ಪಶು ಸಂಗೋಪನಾ ಸಚಿವಾಲಯ ಆದೇಶಿಸಿದೆ. ಅಧಿಕಾರಿಗಳು ಸಕಾಲಕ್ಕೆ ಸಂಪರ್ಕಕ್ಕೆ ಸಿಗದಿದ್ದಲ್ಲಿ ರೈತರು ಮೊ: 8277100200 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿ. ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ದೊರಕಿಸುವ ಕೆಲಸ ಮಾಡುತ್ತಾರೆ’ ಎಂದರು.