ಹುಣಸಗಿ: ತಾಲ್ಲೂಕಿನ ಹಗರಟಗಿ ಗ್ರಾಮದಲ್ಲಿ ಈಚೆಗೆ ಸಿಡಿಲು ಬಡಿದು ಮೃತಪಟ್ಟ ಯಮನಪ್ಪ ಕೊಡ್ಲಿ ಅವರ ಕುಟುಂಬಕ್ಕೆ ಶಾಸಕ ರಾಜೂಗೌಡ ₹4 ಲಕ್ಷದ ಪರಿಹಾರದ ಚೆಕ್ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜೂಗೌಡ,‘ಬೇಸಿಗೆ ಮುಗಿಯುವ ಹಂತದಲ್ಲಿ ಆಗಾಗ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇರುತ್ತದೆ. ಈ ಸಂದರ್ಭದಲ್ಲಿ ರೈತರು ಹಾಗೂ ಕಾರ್ಮಿಕರು ಸುರಕ್ಷಿತ ಸ್ಥಳದಲ್ಲಿ ರಕ್ಷಣೆ ಪಡೆದುಕೊಳ್ಳಬೇಕು. ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಅವರು ಹೇಳಿದರು.
ಗದ್ದೆಮ್ಮ ಯಮನಪ್ಪ ಅವರಿಗೆ ಪರಿಹಾರದ ಚೆಕ್ ಜತೆಗೆ ವೈಯಕ್ತಿಕವಾಗಿ ₹50 ಸಾವಿರ ನೀಡಿದರು.
ಹುಣಸಗಿ ತಹಶೀಲ್ದಾರ್ ಅಶೋಕ ಸುರಪುರಕ್, ಉಪತಹಶೀಲ್ದಾರ್ ಬಸವರಾಜ ಬಿರಾದಾರ ಸೇರಿದಂತೆ ಗ್ರಾಮದ ಪ್ರಮುಖರು ಈ ವೇಳೆ ಇದ್ದರು.