ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸುರಕ್ಷಿತ ಸ್ಥಳದಲ್ಲಿ ರಕ್ಷಣೆ ಪಡೆಯಿರಿ’

Last Updated 24 ಮೇ 2022, 4:40 IST
ಅಕ್ಷರ ಗಾತ್ರ

ಹುಣಸಗಿ: ತಾಲ್ಲೂಕಿನ ಹಗರಟಗಿ ಗ್ರಾಮದಲ್ಲಿ ಈಚೆಗೆ ಸಿಡಿಲು ಬಡಿದು ಮೃತಪಟ್ಟ ಯಮನಪ್ಪ ಕೊಡ್ಲಿ ಅವರ ಕುಟುಂಬಕ್ಕೆ ಶಾಸಕ ರಾಜೂಗೌಡ ₹4 ಲಕ್ಷದ ಪರಿಹಾರದ ಚೆಕ್‌ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜೂಗೌಡ,‘ಬೇಸಿಗೆ ಮುಗಿಯುವ ಹಂತದಲ್ಲಿ ಆಗಾಗ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇರುತ್ತದೆ. ಈ ಸಂದರ್ಭದಲ್ಲಿ ರೈತರು ಹಾಗೂ ಕಾರ್ಮಿಕರು ಸುರಕ್ಷಿತ ಸ್ಥಳದಲ್ಲಿ ರಕ್ಷಣೆ ಪಡೆದುಕೊಳ್ಳಬೇಕು. ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಅವರು ಹೇಳಿದರು.

ಗದ್ದೆಮ್ಮ ಯಮನಪ್ಪ ಅವರಿಗೆ ಪರಿಹಾರದ ಚೆಕ್‌ ಜತೆಗೆ ವೈಯಕ್ತಿಕವಾಗಿ ₹50 ಸಾವಿರ ನೀಡಿದರು.

ಹುಣಸಗಿ ತಹಶೀಲ್ದಾರ್ ಅಶೋಕ ಸುರಪುರಕ್, ಉಪತಹಶೀಲ್ದಾರ್ ಬಸವರಾಜ ಬಿರಾದಾರ ಸೇರಿದಂತೆ ಗ್ರಾಮದ ಪ್ರಮುಖರು ಈ ವೇಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT