ಯಾದಗಿರಿ: ಅಂಗವೈಕಲ್ಯದೇಹಕ್ಕೆಹೊರತು ಮನಸ್ಸಿಗಲ್ಲ, ಎಲ್ಲರಂತೆ ಅಂಗವಿಕಲರು ಸರಿಸಮಾನರು. ಸರಿಯಾದ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿದರೆ ಅಂಗವಿಕಲರು ಉತ್ತಮ ಸಾಧನೆ ಮಾಡಬಲ್ಲರು ಎಂದು ಯಾದಗಿರಿ ಶಾಸಕ ವೆಂಕಟರಡ್ಡಿ ಮುದ್ನಾಳ ಅಭಿಪ್ರಾಯಪಟ್ಟರು.
ನಗರದ ಶಾಸಕರ ಕಚೇರಿಯಲ್ಲಿ ಸೋಮವಾರ ಅಂಗವಿಕಲರಿಗೆ ಸ್ಥಳಿಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 53 ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು.
ತ್ರಿಚಕ್ರ ವಾಹನ ಸರಿಯಾಗಿ ಸದ್ಬಳಕೆಯಾಗಲಿ, ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ವಿಕಲಚೇತನರ ಫಲಾನುಭವಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಬಿ.ವಿ. ದೀಪಿಕಾ ಸೇರಿದಂತೆ ಇಲಾಖೆಯ ಅಧಿಕಾರಿಗಳು ಇದ್ದರು.