<p><strong>ಯಾದಗಿರಿ:</strong> ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಯಾವುದೇ ತರಹದ ಭತ್ಯೆಯನ್ನು ಸ್ವೀಕರಿಸದಿರಲು ನಿರ್ಧಾರಿಸಿದ್ದೇನೆ ಎಂದು ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಅವರು ವಿಧಾನಸಭಾಧ್ಯಕ್ಷರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.</p>.<p>‘ಅಧಿವೇಶನದಲ್ಲಿ ಭಾಗವಹಿಸಿದಾಗ ಸರ್ಕಾರ ನೀಡುವ ಟಿಎ, ಡಿಎ, ವಸತಿ ವ್ಯವಸ್ಥೆ ಪಡೆಯುವುದಿಲ್ಲ. ಕಲಾಪದ ವೇಳೆ ಚಹಾ, ಉಪಾಹಾರ, ಊಟವೂ ಮಾಡದೆ ಹೊರಗಿನಿಂದ ತರಿಸಿಕೊಳ್ಳುತ್ತೇನೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>ಉತ್ತರ ಕರ್ನಾಟಕದ ಸಮಸ್ಯೆಗೆ ಧ್ವನಿಯಾಗಲು ಬೆಳಗಾವಿಯ ಅಧಿವೇಶನಕ್ಕೆ ಪ್ರತಿ ವರ್ಷ ಸುಮಾರು ₹30 ಕೋಟಿ ವೆಚ್ಚವಾಗುತ್ತಿದೆ. ಇದರಿಂದ ಉತ್ತರ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ ಯಾವುದೇ ಪ್ರಯೋಜನ ಆಗಿಲ್ಲ. ಕಳೆದ ಅಧಿವೇಶನಗಳಲ್ಲಿ ನಡೆದ ಚರ್ಚೆಗಳ ಕುರಿತು ಸರ್ಕಾರ ತೆಗೆದುಕೊಂಡ ನಿರ್ಧಾರಗಳ ಬಗ್ಗೆಯೂ ಇದುವರೆಗೂ ಜನರಿಗೆ ತಿಳಿಸಿಲ್ಲ ಎಂದಿದ್ದಾರೆ.</p>.<p>ಉತ್ತರ ಕರ್ನಾಟಕ ಭಾಗದ ರೈತರು, ಬಡವರು, ಕಾರ್ಮಿಕರು ಮತ್ತು ಜನ ಸಾಮಾನ್ಯರು ಹಲವು ಜ್ವಲಂತ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅಭಿವೃದ್ಧಿ, ಅನುದಾನದ ಭರವಸೆ ಇರಿಸಿಕೊಂಡಿದ್ದಾರೆ. ಅಧಿವೇಶನದಲ್ಲಿ ಮಾತನಾಡಿ ಕಾಡಿ, ಬೇಡಿ ಹೋಗುವುದೇ ಆಗುತ್ತಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಯಾವುದೇ ತರಹದ ಭತ್ಯೆಯನ್ನು ಸ್ವೀಕರಿಸದಿರಲು ನಿರ್ಧಾರಿಸಿದ್ದೇನೆ ಎಂದು ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಅವರು ವಿಧಾನಸಭಾಧ್ಯಕ್ಷರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.</p>.<p>‘ಅಧಿವೇಶನದಲ್ಲಿ ಭಾಗವಹಿಸಿದಾಗ ಸರ್ಕಾರ ನೀಡುವ ಟಿಎ, ಡಿಎ, ವಸತಿ ವ್ಯವಸ್ಥೆ ಪಡೆಯುವುದಿಲ್ಲ. ಕಲಾಪದ ವೇಳೆ ಚಹಾ, ಉಪಾಹಾರ, ಊಟವೂ ಮಾಡದೆ ಹೊರಗಿನಿಂದ ತರಿಸಿಕೊಳ್ಳುತ್ತೇನೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>ಉತ್ತರ ಕರ್ನಾಟಕದ ಸಮಸ್ಯೆಗೆ ಧ್ವನಿಯಾಗಲು ಬೆಳಗಾವಿಯ ಅಧಿವೇಶನಕ್ಕೆ ಪ್ರತಿ ವರ್ಷ ಸುಮಾರು ₹30 ಕೋಟಿ ವೆಚ್ಚವಾಗುತ್ತಿದೆ. ಇದರಿಂದ ಉತ್ತರ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ ಯಾವುದೇ ಪ್ರಯೋಜನ ಆಗಿಲ್ಲ. ಕಳೆದ ಅಧಿವೇಶನಗಳಲ್ಲಿ ನಡೆದ ಚರ್ಚೆಗಳ ಕುರಿತು ಸರ್ಕಾರ ತೆಗೆದುಕೊಂಡ ನಿರ್ಧಾರಗಳ ಬಗ್ಗೆಯೂ ಇದುವರೆಗೂ ಜನರಿಗೆ ತಿಳಿಸಿಲ್ಲ ಎಂದಿದ್ದಾರೆ.</p>.<p>ಉತ್ತರ ಕರ್ನಾಟಕ ಭಾಗದ ರೈತರು, ಬಡವರು, ಕಾರ್ಮಿಕರು ಮತ್ತು ಜನ ಸಾಮಾನ್ಯರು ಹಲವು ಜ್ವಲಂತ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅಭಿವೃದ್ಧಿ, ಅನುದಾನದ ಭರವಸೆ ಇರಿಸಿಕೊಂಡಿದ್ದಾರೆ. ಅಧಿವೇಶನದಲ್ಲಿ ಮಾತನಾಡಿ ಕಾಡಿ, ಬೇಡಿ ಹೋಗುವುದೇ ಆಗುತ್ತಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>