<p><strong>ಸುರಪುರ:</strong> ‘ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಬೇಕು. ಸಮಯ ಸಿಕ್ಕಾಗ ಕೃತಿಗಳನ್ನು ಓದಬೇಕು. ಬರೆಯುವುದನ್ನು ರೂಢಿಸಿಕೊಳ್ಳಬೇಕು’ ಎಂದು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಬೀರಣ್ಣ ಆಲ್ದಾಳ ಹೇಳಿದರು.</p>.<p>ಹನಸಾಪುರದ ಗಂಗೋತ್ರಿ ಪದವಿ ಕಾಲೇಜಿನಲ್ಲಿ ಮಂಗಳವಾರ ಕನ್ನಡ ಪುಸ್ತಕ ಪ್ರಾಧಿಕಾರ ಹಮ್ಮಿಕೊಂಡಿದ್ದ ಜಾಣ ಜಾಣೆಯರ ಬಳಗ 2019-20ರ ಅಡಿಯಲ್ಲಿ ನನ್ನ ಮೆಚ್ಚಿನ ಪುಸ್ತಕ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಥೆ, ಕವನ, ಕಾದಂಬರಿಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಿ. ಪುಸ್ತಕಗಳು ವಿಮರ್ಶೆ ಗೊಳಪಟ್ಟು ಬಹುಮಾನ ಪಡೆದಾಗ ಆಗುವ ಆನಂದವೇ ಅನನ್ಯ’ ಎಂದರು.</p>.<p>ಉಪನ್ಯಾಸಕಿ ಫೌಜಿಯಾ ಬೇಗಂ ಮಾತನಾಡಿ, ‘ ನಾಡಿನ ಸಾಹಿತ್ಯ, ಭಾಷೆ, ಕಲೆ, ಸಂಸ್ಕೃತಿ ಅರಿಯಬೇಕು’ ಸಲಹೆ ನೀಡಿದರು.</p>.<p>ಜಾಣ ಜಾಣೆಯರ ಬಳಗದ ಸಂಚಾಲಕ ಡಾ. ಸುರೇಶ ಮಾಮಡಿ ಮಾತನಾಡಿ, ‘ಕನ್ನಡ ಪುಸ್ತಕ ಪ್ರಾಧಿಕಾರಿ ವಿದ್ಯಾರ್ಥಿಗಳಲ್ಲಿ ಇಂದು ಸಾಹಿತ್ಯ ಅಭಿರುಚಿ ಕಡಿಮೆ ಆಗಿದೆ. ಮೊಬೈಲ್ನಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಯುವ ಸಮುದಾಯದಲ್ಲಿ ಸಾಹಿತ್ಯ ಆಸಕ್ತಿ ಬೆಳೆಸಲು ಒಳ್ಳೆಯ ಯೋಜನೆಯನ್ನು ಜಾರಿಗೊಳಿಸಿದೆ. ಹೆಚ್ಚೆಚ್ಚು ಕೃತಿಗಳ ಓದುವ ಮೂಲಕ ಇದನ್ನು ಸದುಪಯೋಗ ಮಾಡಿಕೊಳ್ಳುವಂತೆ’ ತಿಳಿಸಿದರು.</p>.<p>ಪ್ರಾಚಾರ್ಯ ಜ್ಯೋತಿಬಾಯಿ ಮಾಮಡಿ ಅಧ್ಯಕ್ಷತೆ ವಹಿಸಿದ್ದರು. ಮಮತಾ ಸಂಗಡಿಗರು ಸ್ವಾಗತಿಸಿದರು. ಉಪನ್ಯಾಸಕಿ ಚಂದ್ರಬಾಗಮ್ಮ ನಿರೂಪಿ ಸಿದರು. ಮಲ್ಲಿಕಾರ್ಜುನ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ‘ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಬೇಕು. ಸಮಯ ಸಿಕ್ಕಾಗ ಕೃತಿಗಳನ್ನು ಓದಬೇಕು. ಬರೆಯುವುದನ್ನು ರೂಢಿಸಿಕೊಳ್ಳಬೇಕು’ ಎಂದು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಬೀರಣ್ಣ ಆಲ್ದಾಳ ಹೇಳಿದರು.</p>.<p>ಹನಸಾಪುರದ ಗಂಗೋತ್ರಿ ಪದವಿ ಕಾಲೇಜಿನಲ್ಲಿ ಮಂಗಳವಾರ ಕನ್ನಡ ಪುಸ್ತಕ ಪ್ರಾಧಿಕಾರ ಹಮ್ಮಿಕೊಂಡಿದ್ದ ಜಾಣ ಜಾಣೆಯರ ಬಳಗ 2019-20ರ ಅಡಿಯಲ್ಲಿ ನನ್ನ ಮೆಚ್ಚಿನ ಪುಸ್ತಕ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಥೆ, ಕವನ, ಕಾದಂಬರಿಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಿ. ಪುಸ್ತಕಗಳು ವಿಮರ್ಶೆ ಗೊಳಪಟ್ಟು ಬಹುಮಾನ ಪಡೆದಾಗ ಆಗುವ ಆನಂದವೇ ಅನನ್ಯ’ ಎಂದರು.</p>.<p>ಉಪನ್ಯಾಸಕಿ ಫೌಜಿಯಾ ಬೇಗಂ ಮಾತನಾಡಿ, ‘ ನಾಡಿನ ಸಾಹಿತ್ಯ, ಭಾಷೆ, ಕಲೆ, ಸಂಸ್ಕೃತಿ ಅರಿಯಬೇಕು’ ಸಲಹೆ ನೀಡಿದರು.</p>.<p>ಜಾಣ ಜಾಣೆಯರ ಬಳಗದ ಸಂಚಾಲಕ ಡಾ. ಸುರೇಶ ಮಾಮಡಿ ಮಾತನಾಡಿ, ‘ಕನ್ನಡ ಪುಸ್ತಕ ಪ್ರಾಧಿಕಾರಿ ವಿದ್ಯಾರ್ಥಿಗಳಲ್ಲಿ ಇಂದು ಸಾಹಿತ್ಯ ಅಭಿರುಚಿ ಕಡಿಮೆ ಆಗಿದೆ. ಮೊಬೈಲ್ನಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಯುವ ಸಮುದಾಯದಲ್ಲಿ ಸಾಹಿತ್ಯ ಆಸಕ್ತಿ ಬೆಳೆಸಲು ಒಳ್ಳೆಯ ಯೋಜನೆಯನ್ನು ಜಾರಿಗೊಳಿಸಿದೆ. ಹೆಚ್ಚೆಚ್ಚು ಕೃತಿಗಳ ಓದುವ ಮೂಲಕ ಇದನ್ನು ಸದುಪಯೋಗ ಮಾಡಿಕೊಳ್ಳುವಂತೆ’ ತಿಳಿಸಿದರು.</p>.<p>ಪ್ರಾಚಾರ್ಯ ಜ್ಯೋತಿಬಾಯಿ ಮಾಮಡಿ ಅಧ್ಯಕ್ಷತೆ ವಹಿಸಿದ್ದರು. ಮಮತಾ ಸಂಗಡಿಗರು ಸ್ವಾಗತಿಸಿದರು. ಉಪನ್ಯಾಸಕಿ ಚಂದ್ರಬಾಗಮ್ಮ ನಿರೂಪಿ ಸಿದರು. ಮಲ್ಲಿಕಾರ್ಜುನ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>