ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾರಾಯಣಪುರ ಡ್ಯಾಂನ ಮುಖ್ಯಗೇಟ್‌ಗೆ ಪೂಜೆ ಸಲ್ಲಿಸಿ ಕೃಷ್ಣಾ ನದಿಗೆ ನೀರು

Last Updated 12 ಜುಲೈ 2020, 8:40 IST
ಅಕ್ಷರ ಗಾತ್ರ

ಹುಣಸಗಿ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದ ಮುಖ್ಯ ಗೇಟ್‌ಗೆ ಪೂಜೆ ಸಲ್ಲಿಸಿ ಭಾನುವಾರ ಕೃಷ್ಣಾ ನದಿಗೆ ನೀರು ಹರಿಸಲಾಯಿತು.

ಡ್ಯಾಂಗೆ 40,000 ಒಳಹರಿವು ಇದ್ದು, 4 ಗೇಟ್ ಮೂಲಕ ನದಿಗೆ 22,860 ಕ್ಯುಸೆಕ್ ನೀರು ಹರಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ಸುರಪುರ ಶಾಸಕ ರಾಜೂಗೌಡ ಮಾತನಾಡಿ, ಯಾದಗಿರಿ, ರಾಯಚೂರು, ಕಲಬುರ್ಗಿ, ವಿಜಯಪುರ ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ಕೃಷ್ಣೆಯನ್ನು ನೆನೆದು ಊಟ ಮಾಡುವುದನ್ನು ಮರೆಯುವಂತಿಲ್ಲ ಎಂದರು.

ಮಹಾರಾಷ್ಟ್ರ ನದಿ ಪಾತ್ರದಲ್ಲಿ ಮಳೆ ಆಗುತ್ತಿದ್ದು, ಲಾಲ್ ಬಹಾದ್ದೂರ್ ಶಾಸ್ತ್ರಿ ಆಲಮಟ್ಟಿ ಆಣೆಕಟ್ಟಿನಿಂದ ನಾರಾಯಣಪುರ ಜಲಾಶಯಕ್ಕೆ ನೀರು ಹರಿಸುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬರುತ್ತಿದೆ. ಇದರಿಂದ ಕೃಷ್ಣಾ ನದಿಗೆ ನೀರು ಹರಿಸಲಾಗುತ್ತಿದೆ.

ಮುಖ್ಯ ಎಂಜಿನಿಯರ್ ಎಸ್.ರಂಗಾರಾಂ, ಇಇ ಶಂಕರ ನಾಯ್ಕೊಡಿ ಮತ್ತಿತರರ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT