<p><strong>ಯರಗೋಳ</strong>: ಸುತ್ತಲಿನ ಗ್ರಾಮಗಳಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ವಾತಾವರಣವನ್ನು ಹಚ್ಚಹಸಿರಾಗಿಸಿದೆ.</p>.<p>ಹತ್ತಿಕುಣಿ, ಬಾಚವಾರ, ಕೋಟಗೇರಾ, ಮೋಟ್ನಳ್ಳಿ, ಗುಲಗುಂಜಿ, ಕಟ್ಟಿಗೆ ಶಹಾಪುರ, ಸಮಣಾಪುರ, ಸುತಾರ್ ಹೊಸಳ್ಳಿ ಗ್ರಾಮದ ಗುಡ್ಡಗಳಲ್ಲಿ ಮಳೆಯಿಂದಾಗಿ ಕುರುಚುಲು ಗಿಡ–ಪೊದೆಗಳಲ್ಲಿ ಹಸಿರು ನಳನಳಿಸುತ್ತಿದೆ.</p>.<p>ಗುಡ್ಡದಲ್ಲಿನ ಹೊಂಡಗಳಲ್ಲಿ ನೀರು ಸಂಗ್ರಹವಾಗಿದ್ದು, ಪ್ರಾಣಿ, ಪಕ್ಷಿಗಳಿಗಳಾದ ನವಿಲು, ಮೊಲ, ನರಿ, ತೋಳ, ಕಾಡುಹಂದಿಗಳು ಹೆಚ್ಚಿನ ಪ್ರಮಾಣದಲ್ಲಿ ನೆಲೆಸಿವೆ.</p>.<p>ಯರಗೋಳ ಸುತ್ತಲಿನ ಗುಡ್ಡಗಳಲ್ಲಿ ನೈಸರ್ಗಿಕವಾಗಿ ಹೆಚ್ಚಿನ ಪ್ರಮಾಣದಲ್ಲಿ ಸೀತಾಫಲ ಹಣ್ಣಿನ ಗಿಡಗಳು ಬೆಳೆಯುತ್ತವೆ. ಗುಲಗುಂಜಿ ಗ್ರಾಮದ ಕಾಡು ಪ್ರದೇಶದಲ್ಲಿ ನೇರಳೆ ಹಣ್ಣಿನ ಗಿಡಗಳಿವೆ.</p>.<p>ಬಿರುಸಿನ ಮಳೆ ಸುರಿದಾಗೆಲ್ಲ ಕೋಟಗೇರಾ ಗುಡ್ಡದಲ್ಲಿನ ಕಲ್ಲು ಬಂಡೆಗಳ ನಡುವೆ ನೀರು ಬೋರ್ಗರೆದು ಜಲಪಾತ ಸೃಷ್ಟಿಸುತ್ತದೆ. ಈ ವರ್ಷವೂ ಜಲಪಾತ ಕಳೆಗಟ್ಟಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಪ್ರತೀ ಮಳೆಗಾಲದಲ್ಲಿ ಗುಡ್ಡಕ್ಕೆ ಲಗ್ಗೆಹಾಕುವ ಪ್ರವಾಸಿಗರು, ಗುಡ್ಡದಲ್ಲಿ ಬೋರ್ಗರೆದು ಹರಿಯುವ ನೀರು ಕಣ್ತುಂಬಿಕೊಂಡು ಖುಷಿಪಡುತ್ತಿದ್ದಾರೆ. ಯುವಜನರು ಮೊಬೈಲ್ ಫೋನ್ಗಳಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ.</p>.<p>‘ಪ್ರತಿ ವರ್ಷ ಮಳೆಗಾಲದಲ್ಲಿ ಜಲಪಾತ ವೀಕ್ಷಣೆಗೆ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ’ ಎನ್ನುತ್ತಾರೆ ಗ್ರಾಮದ ಉಪನ್ಯಾಸಕ ವೆಂಕಟೇಶ ಚಂದನಕೇರಿ.</p>.<p>ಹತ್ತಿಕುಣಿ ಜಲಾಶಯಕ್ಕೂ ನೀರು ಹರಿದು ಬರುತ್ತಿದ್ದು, ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. ಜಲಾಶಯದ ಸುತ್ತಲಿನ ಗುಡ್ಡಗಳಲ್ಲಿ ಹಸಿರು ಪ್ರವಾಸಿಗರಿಗೆ ಸೆಳೆಯುತ್ತಿದೆ. ಬಹುತೇಕ ಗ್ರಾಮಗಳ ಹಳ್ಳ, ಕೆರೆಗಳಲ್ಲಿ ಮಳೆ ನೀರು ಸಂಗ್ರಹವಾಗುತ್ತಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ.</p>.<div><blockquote>ಪ್ರತೀ ವರ್ಷ ಮಳೆಗಾಲದಲ್ಲಿ ಬಿರುಸಿನ ಮಳೆಗೆ ಕೋಟಗೇರಾ ಗ್ರಾಮದ ಗುಡ್ಡದಲ್ಲಿ ಜಲಪಾತ ಸೃಷ್ಟಿಯಾಗುತ್ತದೆ. ನಾನು ಚಿಕ್ಕಂದಿನಿಂದಲೂ ಜಲಪಾತ ನೋಡಿ ಸಂಭ್ರಮಿಸುತ್ತೇನೆ </blockquote><span class="attribution">ಜಾಫರ್ ಕೋಟೆಗೇರಾ ಗ್ರಾಮದ ಯುವಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯರಗೋಳ</strong>: ಸುತ್ತಲಿನ ಗ್ರಾಮಗಳಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ವಾತಾವರಣವನ್ನು ಹಚ್ಚಹಸಿರಾಗಿಸಿದೆ.</p>.<p>ಹತ್ತಿಕುಣಿ, ಬಾಚವಾರ, ಕೋಟಗೇರಾ, ಮೋಟ್ನಳ್ಳಿ, ಗುಲಗುಂಜಿ, ಕಟ್ಟಿಗೆ ಶಹಾಪುರ, ಸಮಣಾಪುರ, ಸುತಾರ್ ಹೊಸಳ್ಳಿ ಗ್ರಾಮದ ಗುಡ್ಡಗಳಲ್ಲಿ ಮಳೆಯಿಂದಾಗಿ ಕುರುಚುಲು ಗಿಡ–ಪೊದೆಗಳಲ್ಲಿ ಹಸಿರು ನಳನಳಿಸುತ್ತಿದೆ.</p>.<p>ಗುಡ್ಡದಲ್ಲಿನ ಹೊಂಡಗಳಲ್ಲಿ ನೀರು ಸಂಗ್ರಹವಾಗಿದ್ದು, ಪ್ರಾಣಿ, ಪಕ್ಷಿಗಳಿಗಳಾದ ನವಿಲು, ಮೊಲ, ನರಿ, ತೋಳ, ಕಾಡುಹಂದಿಗಳು ಹೆಚ್ಚಿನ ಪ್ರಮಾಣದಲ್ಲಿ ನೆಲೆಸಿವೆ.</p>.<p>ಯರಗೋಳ ಸುತ್ತಲಿನ ಗುಡ್ಡಗಳಲ್ಲಿ ನೈಸರ್ಗಿಕವಾಗಿ ಹೆಚ್ಚಿನ ಪ್ರಮಾಣದಲ್ಲಿ ಸೀತಾಫಲ ಹಣ್ಣಿನ ಗಿಡಗಳು ಬೆಳೆಯುತ್ತವೆ. ಗುಲಗುಂಜಿ ಗ್ರಾಮದ ಕಾಡು ಪ್ರದೇಶದಲ್ಲಿ ನೇರಳೆ ಹಣ್ಣಿನ ಗಿಡಗಳಿವೆ.</p>.<p>ಬಿರುಸಿನ ಮಳೆ ಸುರಿದಾಗೆಲ್ಲ ಕೋಟಗೇರಾ ಗುಡ್ಡದಲ್ಲಿನ ಕಲ್ಲು ಬಂಡೆಗಳ ನಡುವೆ ನೀರು ಬೋರ್ಗರೆದು ಜಲಪಾತ ಸೃಷ್ಟಿಸುತ್ತದೆ. ಈ ವರ್ಷವೂ ಜಲಪಾತ ಕಳೆಗಟ್ಟಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಪ್ರತೀ ಮಳೆಗಾಲದಲ್ಲಿ ಗುಡ್ಡಕ್ಕೆ ಲಗ್ಗೆಹಾಕುವ ಪ್ರವಾಸಿಗರು, ಗುಡ್ಡದಲ್ಲಿ ಬೋರ್ಗರೆದು ಹರಿಯುವ ನೀರು ಕಣ್ತುಂಬಿಕೊಂಡು ಖುಷಿಪಡುತ್ತಿದ್ದಾರೆ. ಯುವಜನರು ಮೊಬೈಲ್ ಫೋನ್ಗಳಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ.</p>.<p>‘ಪ್ರತಿ ವರ್ಷ ಮಳೆಗಾಲದಲ್ಲಿ ಜಲಪಾತ ವೀಕ್ಷಣೆಗೆ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ’ ಎನ್ನುತ್ತಾರೆ ಗ್ರಾಮದ ಉಪನ್ಯಾಸಕ ವೆಂಕಟೇಶ ಚಂದನಕೇರಿ.</p>.<p>ಹತ್ತಿಕುಣಿ ಜಲಾಶಯಕ್ಕೂ ನೀರು ಹರಿದು ಬರುತ್ತಿದ್ದು, ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. ಜಲಾಶಯದ ಸುತ್ತಲಿನ ಗುಡ್ಡಗಳಲ್ಲಿ ಹಸಿರು ಪ್ರವಾಸಿಗರಿಗೆ ಸೆಳೆಯುತ್ತಿದೆ. ಬಹುತೇಕ ಗ್ರಾಮಗಳ ಹಳ್ಳ, ಕೆರೆಗಳಲ್ಲಿ ಮಳೆ ನೀರು ಸಂಗ್ರಹವಾಗುತ್ತಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ.</p>.<div><blockquote>ಪ್ರತೀ ವರ್ಷ ಮಳೆಗಾಲದಲ್ಲಿ ಬಿರುಸಿನ ಮಳೆಗೆ ಕೋಟಗೇರಾ ಗ್ರಾಮದ ಗುಡ್ಡದಲ್ಲಿ ಜಲಪಾತ ಸೃಷ್ಟಿಯಾಗುತ್ತದೆ. ನಾನು ಚಿಕ್ಕಂದಿನಿಂದಲೂ ಜಲಪಾತ ನೋಡಿ ಸಂಭ್ರಮಿಸುತ್ತೇನೆ </blockquote><span class="attribution">ಜಾಫರ್ ಕೋಟೆಗೇರಾ ಗ್ರಾಮದ ಯುವಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>