ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಣಿ ಸಭೆ

Last Updated 24 ನವೆಂಬರ್ 2020, 16:43 IST
ಅಕ್ಷರ ಗಾತ್ರ

ಯಾದಗಿರಿ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು.

ಮುಖ್ಯಮಂತ್ರಿ ‌ಬಿ.ಎಸ್‌.ಯಡಿಯೂರಪ್ಪ ಅವರು ಹಿಂದುಳಿದ ವರ್ಗಕ್ಕೆ ಅನೇಕ ಕೊಡುಗೆ ನೀಡಿದ್ದಾರೆ. ಸಣ್ಣ ಪುಟ್ಟ ಸಮುದಾಯಗಳನ್ನು ಲಕ್ಷ್ಯಕ್ಕೆ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಉಪಾಧ್ಯಕ್ಷ ಗೋವಿಂದರಾಜ್ ಹೇಳಿದರು.

‌ಸಾಮಾಜಿಕ ನ್ಯಾಯದ ಸಿದ್ಧಾಂತದಡಿ ಸರ್ವರಿಗೂ ಸಮಪಾಲು ಸಮಬಾಳು ಎಂಬ ತತ್ವವನ್ನು ಜಾರಿಗೆ ತಂದವರು ಯಡಿಯೂರಪ್ಪ ಎಂದು ಹೇಳಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ ಬಾಬು ಮಾತನಾಡಿ, ಮಹಾಶಕ್ತಿ ಕೇಂದ್ರದಲ್ಲಿ ಒಬ್ಬ ಹಿಂದುಳಿದ ವರ್ಗ, ಬೂತ್ ಮಟ್ಟದಲ್ಲಿ ಇಬ್ಬರು ಹಿಂದುಳಿದ ವರ್ಗದವರು ಒಳಗೊಂಡಂತೆ ಸಮಿತಿ ರಚಿಸುವಲ್ಲಿ ನಿಗಾವಹಿಸಬೇಕೆಂದು ಕಾರ್ಯಕಾರಿಣಿ ಸದಸ್ಯರಿಗೆ ಸೂಚಿಸಿದರು.

ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಮಾತನಾಡಿ, ಹಿಂದುಳಿದ ವರ್ಗಗಳ ಸಂಘಟನೆ ಜಿಲ್ಲೆಯಲ್ಲಿ ಸದೃಢವಾಗಿದೆ. ಜತೆಗೆ ಎಲ್ಲ ಒಳಪಂಗಡಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಕೆಲಸಗಳನ್ನು ತಿಳಿಸುವ ಮತ್ತು ಸಂಘಟನೆ ಇನ್ನಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಕಿವಿಮಾತು ಹೇಳಿದರು.

ಪ್ರಾಸ್ತಾವಿಕವಾಗಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ದೇವಿಂದ್ರಪ್ಪ ಖಾನಾಪುರ, ಮೋರ್ಚಾ ರಾಜ್ಯ ಉಪಾಧ್ಯಕ್ಷ ಶರಣಪ್ಪ ತಳವಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ ಮಾತನಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೀಂದ್ರನಾಥ ನಾದ, ವೆಂಕಟರೆಡ್ಡಿ ಅಬ್ಬೆತುಮಕೂರು, ಗುರುಕಾಮಾ, ಮಲ್ಲಿಕಾರ್ಜುನ ರಸ್ತಾಪುರ, ನಾಗರಾಜಗೌಡ ಮಾನಸಗಲ್, ವಿರೂಪಾಕ್ಷಯ್ಯ ಸ್ವಾಮಿ ಹೆಡಗಿಮದ್ರ, ಆನಂದ ಗಡ್ಡಿಮನಿ, ಸಿದ್ದುಕುಮಾರ ಗುಡೂರು, ಓಬಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೀಂದ್ರಪ್ಪ ಯಲಿಮನಿ, ನೀಲಂಕಠ ಬೈಚಬಾಳ, ನಿಂಗಣ್ಣ ಪೂಜಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT