<p><strong>ಯಾದಗಿರಿ</strong>: ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬರೋಬ್ಬರಿ 17 ಜನ ಆಕಾಂಕ್ಷಿಗಳು ತಮ್ಮ ಮನದಿಂಗಿತವನ್ನು ವೀಕ್ಷಕರಿಗೆ ಮುಟ್ಟಿಸಿದ್ದು, ಸಂಕ್ರಾಂತಿ ಹಬ್ಬದ ಸಿಹಿ ಯಾರಿಗೆ ಸಿಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.</p>.<p>ಪ್ರಸ್ತುತ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಡಾ.ಶರಣಭೂಪಾಲರೆಡ್ಡಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗಾಗಲೇ ಅವರ ಅವಧಿ ಮುಗಿದಿದ್ದು, ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ.</p>.<p>ಜಿಲ್ಲೆಯೂ ನಾಲ್ಕು ಮತಕ್ಷೇತ್ರಗಳನ್ನು ಹೊಂದಿದ್ದು, ಈಗಾಗಲೇ ಯಾದಗಿರಿ, ಶಹಾಪುರ ಮತಕ್ಷೇತ್ರದವರು ಮಾತ್ರ ಅಧ್ಯಕ್ಷಗಿರಿ ಅನುಭವಿಸಿದ್ದಾರೆ. ಈ ಬಾರಿ ಸುರಪುರ, ಗುರುಮಠಕಲ್ ಮತಕ್ಷೇತ್ರದಿಂದಲೂ ಆಕಾಂಕ್ಷಿಗಳಿದ್ದು, ಅಧ್ಯಕ್ಷ ಪಟ್ಟ ಯಾರಿಗೆ ಸಿಗಲಿದೆ ಎನ್ನುವುದು ಗುಟ್ಟಾಗಿ ಉಳಿದಿದೆ.</p>.<p>ಬಿಜೆಪಿಯ ಆರು ಮಂಡಲ ಪದಾಧಿಕಾರಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.</p>.<p>ಯಾದಗಿರಿ, ಶಹಾಪುರದಿಂದ ಹೆಚ್ಚು ಆಕಾಂಕ್ಷಿಗಳು: ಜಿಲ್ಲೆಯಲ್ಲಿ ಯಾದಗಿರಿ, ಶಹಾಪುರ ಮತಕ್ಷೇತ್ರದಿಂದ ಮಾತ್ರ ಹೆಚ್ಚು ಜನ ಆಕಾಂಕ್ಷಿಗಳಿದ್ದಾರೆ. ಉಳಿದ ಸುರಪುರ, ಗುರುಮಠಕಲ್ ಮತಕ್ಷೇತ್ರದಿಂದ ತಲಾ ಒಬ್ಬೊಬ್ಬರು ಮಾತ್ರ ವೀಕ್ಷಕರಿಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದರಿಂದ ಎರಡು ಮತಕ್ಷೇತ್ರದಲ್ಲಿ ಮಾತ್ರ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗಿದೆ.</p>.<p>ಈ ಬಾರಿ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗಕ್ಕೆ ನೀಡಬೇಕು ಎನ್ನುವ ಆಗ್ರಹ ಕೇಳಿ ಬರುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬರೋಬ್ಬರಿ 17 ಜನ ಆಕಾಂಕ್ಷಿಗಳು ತಮ್ಮ ಮನದಿಂಗಿತವನ್ನು ವೀಕ್ಷಕರಿಗೆ ಮುಟ್ಟಿಸಿದ್ದು, ಸಂಕ್ರಾಂತಿ ಹಬ್ಬದ ಸಿಹಿ ಯಾರಿಗೆ ಸಿಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.</p>.<p>ಪ್ರಸ್ತುತ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಡಾ.ಶರಣಭೂಪಾಲರೆಡ್ಡಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗಾಗಲೇ ಅವರ ಅವಧಿ ಮುಗಿದಿದ್ದು, ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ.</p>.<p>ಜಿಲ್ಲೆಯೂ ನಾಲ್ಕು ಮತಕ್ಷೇತ್ರಗಳನ್ನು ಹೊಂದಿದ್ದು, ಈಗಾಗಲೇ ಯಾದಗಿರಿ, ಶಹಾಪುರ ಮತಕ್ಷೇತ್ರದವರು ಮಾತ್ರ ಅಧ್ಯಕ್ಷಗಿರಿ ಅನುಭವಿಸಿದ್ದಾರೆ. ಈ ಬಾರಿ ಸುರಪುರ, ಗುರುಮಠಕಲ್ ಮತಕ್ಷೇತ್ರದಿಂದಲೂ ಆಕಾಂಕ್ಷಿಗಳಿದ್ದು, ಅಧ್ಯಕ್ಷ ಪಟ್ಟ ಯಾರಿಗೆ ಸಿಗಲಿದೆ ಎನ್ನುವುದು ಗುಟ್ಟಾಗಿ ಉಳಿದಿದೆ.</p>.<p>ಬಿಜೆಪಿಯ ಆರು ಮಂಡಲ ಪದಾಧಿಕಾರಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.</p>.<p>ಯಾದಗಿರಿ, ಶಹಾಪುರದಿಂದ ಹೆಚ್ಚು ಆಕಾಂಕ್ಷಿಗಳು: ಜಿಲ್ಲೆಯಲ್ಲಿ ಯಾದಗಿರಿ, ಶಹಾಪುರ ಮತಕ್ಷೇತ್ರದಿಂದ ಮಾತ್ರ ಹೆಚ್ಚು ಜನ ಆಕಾಂಕ್ಷಿಗಳಿದ್ದಾರೆ. ಉಳಿದ ಸುರಪುರ, ಗುರುಮಠಕಲ್ ಮತಕ್ಷೇತ್ರದಿಂದ ತಲಾ ಒಬ್ಬೊಬ್ಬರು ಮಾತ್ರ ವೀಕ್ಷಕರಿಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದರಿಂದ ಎರಡು ಮತಕ್ಷೇತ್ರದಲ್ಲಿ ಮಾತ್ರ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗಿದೆ.</p>.<p>ಈ ಬಾರಿ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗಕ್ಕೆ ನೀಡಬೇಕು ಎನ್ನುವ ಆಗ್ರಹ ಕೇಳಿ ಬರುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>