ಯಾದಗಿರಿ ನಗರದ ದೊಡ್ಡ ಕೆರೆಯಲ್ಲಿ ನೀರು ಕಡಿಮೆಯಾಗಿರುವುದು ಪ್ರಜಾವಾಣಿ ಚಿತ್ರ/ ರಾಜಕುಮಾರ ನಳ್ಳಿಕರ
ಶಹಾಪುರ ತಾಲ್ಲೂಕಿನ ಹೊಸಕೇರಾ ಕೆರೆಯಲ್ಲಿ ನೀರು ಸಂಗ್ರಹವಾಗಿರುವುದು
ವಡಗೇರಾ ಪಟ್ಟಣದಿಂದ ಅನತಿ ದೂರದಲ್ಲಿರುವ ಹೊಸ ಕೆರೆ ಬತ್ತಿರುವುದು
ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ 71 ಕೆರೆಗಳಿದ್ದು ಈ ಬಾರಿ 4 ಕೆರೆಗಳು ಭರ್ತಿಯೇ ಆಗಿಲ್ಲ. ಶೇ 1 ರಿಂದ 30 ರಷ್ಟು 65 ಕೆರೆಗಳು ಶೇ 31 ರಿಂದ 50 ರಷ್ಟು 2 ಕೆರೆಗಳು ಭರ್ತಿಯಾಗಿವೆ
- ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ
ಕೆರೆಗಳಲ್ಲಿ ನೀರು ಕಡಿಮೆಯಾದ ಕಾರಣ ಅಂರ್ಜಲಮಟ್ಟ ಕಡಿಮೆಯಾಗಿದೆ. ಯಂಪಾಡ ಮಧಾವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಸಗಿ ಕೊಳವೆಬಾವಿಯಿಂದ ನೀರು ಪಡೆದು ಪೂರೈಕೆ ಮಾಡಲಾಗುತ್ತಿದೆ
-ಬಸವರಾಜ ಶರಭೈ ಇಒ ತಾಲ್ಲೂಕು ಪಂಚಾಯಿತಿ ಯಾದಗಿರಿ
ಮೀನುಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ 40 ಎಕರೆಗೂ ಹೆಚ್ಚು ವಿಸ್ತೀರ್ಣ ಹೊಂದಿರುವ 5 ಕೆರೆಗಳಿವೆ. ಇಲ್ಲಿ ನೀರಿನ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾದರೂ ಜಲಚರಗಳಿಗೆ ಅಪಾಯವಿಲ್ಲ
- ಉಮೇಶ ಭೋವಿ ಸಹಾಯಕ ನಿರ್ದೇಶಕ ಮೀನುಗಾರಿಕೆ ಇಲಾಖೆ
ಸರ್ಕಾರ ಬರಗಾಲ ಕಾಮಗಾರಿ ಅಡಿ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಬೇಕು. ಒತ್ತುವರಿ ತಡೆಯಬೇಕು. ಜಲಚರಗಳನ್ನು ರಕ್ಷಿಸಬೇಕು
- ವೆಂಕಟರೆಡ್ಡಿ ಭೋವಿ ಸಾಮಾಜಿಕ ಕಾರ್ಯಕರ್ತ
ಬೇಸಿಗೆಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅವಶ್ಯಕತೆ ಇರುವ ಕಡೆ ನೀರಿನ ತೊಟ್ಟಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು
- ಮಲ್ಲಿಕಾರ್ಜುನ ಸಂಗ್ವಾರ್ ತಾ.ಪಂ. ಇಒ ವಡಗೇರಾ
ತಾಲ್ಲೂಕು ವ್ಯಾಪ್ತಿಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ನಡೆದರೆ ಜಾನುವಾರುಗಳಿಗೆ ಹಾಗೂ ರೈತರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ಅನುಕೂಲವಾಗಲಿದೆ
- ಯಂಕಣ್ಣ ಬಸಂತಪುರ ರೈತ ವಡಗೇರಾ
ಕೆರೆಯ ಒಡಲು ಬರಿದಾಗುತ್ತಿರುವುದರಿಂದ ಅಂತರ್ಜಲ ಮಟ್ಟ ಕುಸಿತವಾಗಿ ಕೊಳವೆಬಾವಿಯಲ್ಲಿ ನೀರು ಬರುತ್ತಿಲ್ಲ. ಕೆರೆಯಲ್ಲಿನ ತ್ಯಾಜ್ಯ ವಸ್ತುಗಳನ್ನು ತೆಗೆಯಬೇಕು