<p><strong>ಯಾದಗಿರಿ:</strong> ಸುರಪುರ ತಾಲ್ಲೂಕಿನ ತಿಂಥಣಿ ಮೌನೇಶ್ವರ ಜಾತ್ರೆಯು ಜನವರಿ 28ರಿಂದ ಫೆಬ್ರವರಿ 2ರವರೆಗೆ ನಡೆಯಲಿದ್ದು, ಕ್ಷೇತ್ರದಲ್ಲಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಕಾರ್ಮಿಕ ಯೂನಿಯನ್ ಹಾಗೂ ವಿಶ್ವಕರ್ಮ ಮಹಾಸಭಾ ಮುಖಂಡರು ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.</p>.<p>ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ತಿಂಥಣಿಯ ಮೌನೇಶ್ವರ ಕ್ಷೇತ್ರವೂ ಒಂದಾಗಿದೆ. ಜಾತ್ರಾ ಮಹೋತ್ಸವಕ್ಕೆ ರಾಜ್ಯ ಸೇರಿದಂತೆ ಹೊರರಾಜ್ಯಗಳಿಂದ ಭಕ್ತರು ಬರುತ್ತಾರೆ. ಹೀಗಾಗಿ, ಮೂಲಸೌಕರ್ಯ ಕಲ್ಪಿಸುವುದರ ಜೊತೆಗೆ ಆಕರ್ಷಕ ವಿದ್ಯುತ್ ದೀಪಗಳನ್ನು ಅಳವಡಿಸಬೇಕು ಎಂದಿದ್ದಾರೆ.</p>.<p>ಜಾತ್ರೆಗೆ ಲಕ್ಷಾಂತರ ಭಕ್ತರು ಬಂದು ಸೇರುತ್ತಾರೆ. ಮೂಲಸೌಕರ್ಯಕ್ಕಾಗಿ ಪ್ರತಿ ವರ್ಷ ಮನವಿ ಮಾಡಿಕೊಂಡರೂ ಬಂದಂತಹ ಭಕ್ತರಿಗೆ ತೊಂದರೆ ಆಗುತ್ತಲೇ ಇದೆ. ಈ ವರ್ಷವಾದರೂ ಮುಂಚಿತವಾಗಿ ಕ್ರಮಕ್ಕೆ ಮುಂದಾಗಬೇಕು ಎಂದಿದ್ದಾರೆ.</p>.<p>ಮೂಲಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ವಿಶೇಷ ಬಸ್ ವ್ಯವಸ್ಥೆ, ಕಾಳಿಕಾದೇವಿ ದೇವಸ್ಥಾನ ಹತ್ತಿರ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಅನಗತ್ಯ ಅಂಗಡಿಗಳಿಗೆ ಕಡಿವಾಣ ಹಾಕಬೇಕು. ಪೂಜೆ, ಸಂಗೀಕ ಕಾರ್ಯಕ್ರಮಗಳಿಗೆ ಅನುಗುಣವಾಗಿ ಲೈಟಿಂಗ್ ವ್ಯವಸ್ಥೆ ಮಾಡಬೇಕು ಎಂದು ಕೋರಿದ್ದಾರೆ.</p>.<p>ಈ ವೇಳೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲಾಧ್ಯಕ್ಷ ಮಹೇಶ್ ವಿಶ್ವಕರ್ಮ ತಡಿಬಿಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಬಿ. ವಿಶ್ವಕರ್ಮ, ತಾಲ್ಲೂಕು ಅಧ್ಯಕ್ಷ ದೇವಿಂದ್ರಪ್ಪ ವಿಶ್ವಕರ್ಮ, ಜಿಲ್ಲಾ ಗೌರವಾಧ್ಯಕ್ಷ ಶಿವಣ್ಣ ಉನೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಸುರಪುರ ತಾಲ್ಲೂಕಿನ ತಿಂಥಣಿ ಮೌನೇಶ್ವರ ಜಾತ್ರೆಯು ಜನವರಿ 28ರಿಂದ ಫೆಬ್ರವರಿ 2ರವರೆಗೆ ನಡೆಯಲಿದ್ದು, ಕ್ಷೇತ್ರದಲ್ಲಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಕಾರ್ಮಿಕ ಯೂನಿಯನ್ ಹಾಗೂ ವಿಶ್ವಕರ್ಮ ಮಹಾಸಭಾ ಮುಖಂಡರು ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.</p>.<p>ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ತಿಂಥಣಿಯ ಮೌನೇಶ್ವರ ಕ್ಷೇತ್ರವೂ ಒಂದಾಗಿದೆ. ಜಾತ್ರಾ ಮಹೋತ್ಸವಕ್ಕೆ ರಾಜ್ಯ ಸೇರಿದಂತೆ ಹೊರರಾಜ್ಯಗಳಿಂದ ಭಕ್ತರು ಬರುತ್ತಾರೆ. ಹೀಗಾಗಿ, ಮೂಲಸೌಕರ್ಯ ಕಲ್ಪಿಸುವುದರ ಜೊತೆಗೆ ಆಕರ್ಷಕ ವಿದ್ಯುತ್ ದೀಪಗಳನ್ನು ಅಳವಡಿಸಬೇಕು ಎಂದಿದ್ದಾರೆ.</p>.<p>ಜಾತ್ರೆಗೆ ಲಕ್ಷಾಂತರ ಭಕ್ತರು ಬಂದು ಸೇರುತ್ತಾರೆ. ಮೂಲಸೌಕರ್ಯಕ್ಕಾಗಿ ಪ್ರತಿ ವರ್ಷ ಮನವಿ ಮಾಡಿಕೊಂಡರೂ ಬಂದಂತಹ ಭಕ್ತರಿಗೆ ತೊಂದರೆ ಆಗುತ್ತಲೇ ಇದೆ. ಈ ವರ್ಷವಾದರೂ ಮುಂಚಿತವಾಗಿ ಕ್ರಮಕ್ಕೆ ಮುಂದಾಗಬೇಕು ಎಂದಿದ್ದಾರೆ.</p>.<p>ಮೂಲಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ವಿಶೇಷ ಬಸ್ ವ್ಯವಸ್ಥೆ, ಕಾಳಿಕಾದೇವಿ ದೇವಸ್ಥಾನ ಹತ್ತಿರ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಅನಗತ್ಯ ಅಂಗಡಿಗಳಿಗೆ ಕಡಿವಾಣ ಹಾಕಬೇಕು. ಪೂಜೆ, ಸಂಗೀಕ ಕಾರ್ಯಕ್ರಮಗಳಿಗೆ ಅನುಗುಣವಾಗಿ ಲೈಟಿಂಗ್ ವ್ಯವಸ್ಥೆ ಮಾಡಬೇಕು ಎಂದು ಕೋರಿದ್ದಾರೆ.</p>.<p>ಈ ವೇಳೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲಾಧ್ಯಕ್ಷ ಮಹೇಶ್ ವಿಶ್ವಕರ್ಮ ತಡಿಬಿಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಬಿ. ವಿಶ್ವಕರ್ಮ, ತಾಲ್ಲೂಕು ಅಧ್ಯಕ್ಷ ದೇವಿಂದ್ರಪ್ಪ ವಿಶ್ವಕರ್ಮ, ಜಿಲ್ಲಾ ಗೌರವಾಧ್ಯಕ್ಷ ಶಿವಣ್ಣ ಉನೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>