ಯಾದಗಿರಿ: ರಸ್ತೆ ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಕಲಬುರ್ಗಿ ಸಂಸದ ಡಾ.ಉಮೇಶ ಜಾಧವಮಾನವೀಯತೆ ಮೆರೆದಿದ್ದಾರೆ.
ಯಾದಗಿರಿ– ಹೈದರಾಬಾದ್ ರಸ್ತೆಯ ರೈಸ್ ಮಿಲ್ ಬಳಿ ಅಪಘಾತವಾಗಿ ಇಬ್ಬರು ಬಿದ್ದಿದ್ದರು. ಈ ವೇಳೆ ಇದೇ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಸಂಸದ ಜಾಧವ ತಕ್ಷಣ ತಮ್ಮ ಕಾರಿನಲ್ಲಿ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರು.
ಯಾದಗಿರಿಯಲ್ಲಿ ನಡೆದ ಬರ ಪರಿಹಾರ ಹಾಗೂ ಕಾರ್ಯನಿರ್ವಹಣೆ ಕುರಿತು ಸಭೆಯಲ್ಲಿ ಭಾಗವಹಿಸಿದ ನಂತರ ರೈಲ್ವೆ ಕೋಚ್ ಫ್ಯಾಕ್ಟರಿಗೆ ಸಂಸದರು ಪ್ರಯಾಣ ಬೆಳೆಸಿದ್ದರು.