ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲವಾದರೂ, ಸಂಭವನೀಯ ದುರಂತ ಮಾತ್ರ ಎಲ್ಲರನ್ನು ಬೆಚ್ಚಿಬೀಳಿಸಿತ್ತು. ಒಂದು ವೇಳೆ ಸಂಭವಿಸಿದ್ದರೆ ಮನೆಗೆ ಮೂರು ಹೆಣಗಳು ಉರುಳಿ ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಪ್ರಕರಣಕ್ಕೂ ದೊಡ್ಡ ದುರಂತವಾಗುತ್ತಿತ್ತು ಎಂದೇ ಜನರು ಆತಂಕ ತೋಡಿಕೊಂಡಿದ್ದರು. ಅದನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಂಭೀರವಾಗಿ ತೆಗೆದುಕೊಂಡು ಪ್ರರಕಣದ ಸಮಗ್ರ ವರದಿ ಸರ್ಕಾರಕ್ಕೆ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಆದೇಶಿಸಿದ್ದರು. ಹಾಗಾಗಿ, ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ ಅವರು ವಿಶೇಷ ತನಿಖಾ ತಂಡ ರಚಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದ್ದರು.