ಶಹಾಪುರ: ‘ನಗರದ ಹೆದ್ದಾರಿ ಅಕ್ಕಪಕ್ಕದಲ್ಲಿ ಚರಂಡಿ ಮೇಲೆ ಅನಧಿಕೃತವಾಗಿ ಡಬ್ಬಾ, ಚಹಾದಂಗಡಿ, ಬಟ್ಟೆ ಅಂಗಡಿ ಸ್ಥಾಪಿಸಿರುವುದು ಕಂಡು ಬಂದಿದೆ. ಮಳೆಗಾಲ ಆರಂಭವಾಗಿದ್ದರಿಂದ ಚರಂಡಿ ಸ್ವಚ್ಛಗೊಳಿಸಲು ತುಂಬಾ ತೊಂದರೆಯಾಗುತ್ತಿದೆ. ಅಲ್ಲದೆ ಸ್ವಚ್ಛತೆ ಇಲ್ಲವಾಗಿದೆ. ಯಾರೇ ಆಗಲಿ ಅನಧಿಕೃತವಾಗಿ ಸ್ಥಾಪಿಸಿದ ಡಬ್ಬಾ ಅಂಗಡಿಗಳನ್ನು ತೆರವುಗೊಳಿಸಬೇಕು’ ಎಂದು ಪೌರಾಯುಕ್ತ ರಮೇಶ ಬಡಿಗೇರ ಚರಂಡಿ ಮೇಲೆ ಅನಧಿಕೃತವಾಗಿ ಡಬ್ಬಾ ಅಂಗಡಿ ಸ್ಥಾಪಿಸಿದ ವ್ಯಕ್ತಿಗಳಿಗೆ ತಾಕೀತು ಮಾಡಿದ್ದಾರೆ.