<p><strong>ಯಾದಗಿರಿ:</strong> ಕೊಲೆ ಆರೋಪ ಸಾಬೀತು ಆಗಿದ್ದರಿಂದ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಿದೆ.</p>.<p>ವಡಗೇರಾ ತಾಲ್ಲೂಕಿನ ಕಾಡಂಗೇರಾ ಗ್ರಾಮದ ಸಾಬಣ್ಣ ಮಲ್ಲಯ್ಯ ಶಿಕ್ಷೆಗೆ ಒಳಗಾದ ಅಪರಾಧಿ.</p>.<p>ಅನೈತಿಕ ಸಂಬಂಧದ ಶಂಕೆಯಡಿ ಸಾಬಣ್ಣ, 2020ರ ಫೆಬ್ರುವರಿ 17ರಂದು ನಾಗರಾಜ ಸಿದ್ದಯ್ಯ ಅವರನ್ನು ಕೊಲೆ ಮಾಡಿದ್ದರು. ಮನೆಯ ಮುಂದೆ ಮಲಗಿದ್ದ ನಾಗರಾಜ ಅವರನ್ನು ಕೊಡಲಿಯಿಂದ ತಲೆ, ಕಪಾಳಕೆ ಹೊಡೆದು ಕೊಲೆಗೈದಿದ್ದ. ಈ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐ ಶರಣುಗೌಡ ನ್ಯಾಮ್ಣ್ಣನವರ್ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.</p>.<p>ವಾದ–ಪ್ರತಿವಾದ ಆಲಿಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಈರಣ್ಣ ಅವರು ಸಾಬಣ್ಣಗೆ ಸೆಕ್ಷನ್ 302 ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ₹ 10,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.</p>.<p>ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಗುರುಲಿಂಗಪ್ಪ ಶ್ರೀಮಂತ ತೇಲಿ ಅವರು ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಕೊಲೆ ಆರೋಪ ಸಾಬೀತು ಆಗಿದ್ದರಿಂದ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಿದೆ.</p>.<p>ವಡಗೇರಾ ತಾಲ್ಲೂಕಿನ ಕಾಡಂಗೇರಾ ಗ್ರಾಮದ ಸಾಬಣ್ಣ ಮಲ್ಲಯ್ಯ ಶಿಕ್ಷೆಗೆ ಒಳಗಾದ ಅಪರಾಧಿ.</p>.<p>ಅನೈತಿಕ ಸಂಬಂಧದ ಶಂಕೆಯಡಿ ಸಾಬಣ್ಣ, 2020ರ ಫೆಬ್ರುವರಿ 17ರಂದು ನಾಗರಾಜ ಸಿದ್ದಯ್ಯ ಅವರನ್ನು ಕೊಲೆ ಮಾಡಿದ್ದರು. ಮನೆಯ ಮುಂದೆ ಮಲಗಿದ್ದ ನಾಗರಾಜ ಅವರನ್ನು ಕೊಡಲಿಯಿಂದ ತಲೆ, ಕಪಾಳಕೆ ಹೊಡೆದು ಕೊಲೆಗೈದಿದ್ದ. ಈ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐ ಶರಣುಗೌಡ ನ್ಯಾಮ್ಣ್ಣನವರ್ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.</p>.<p>ವಾದ–ಪ್ರತಿವಾದ ಆಲಿಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಈರಣ್ಣ ಅವರು ಸಾಬಣ್ಣಗೆ ಸೆಕ್ಷನ್ 302 ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ₹ 10,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.</p>.<p>ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಗುರುಲಿಂಗಪ್ಪ ಶ್ರೀಮಂತ ತೇಲಿ ಅವರು ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>