ಪಟ್ಟಣದ ಹೊರವಲಯದ ಕರಿಬೆಟ್ಟ ಕ್ರಾಸ್ ಹತ್ತಿರ ಯಾದಗಿರಿ-ರಾಯಚೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಹತ್ತಿ ಹೊಲದಲ್ಲಿ ರಕ್ತದ ಮಡುವಿನಲ್ಲಿ ಬಿದಿದ್ದ ಯುವಕನ್ನು ಆಂಬುಲೆನ್ಸ್ ಮೂಲಕ ಸೈದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ತಲೆಯ ಭಾಗಕ್ಕೆ ಬಲವಾದ ಏಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆರೋಗ್ಯ ಕೇಂದ್ರದಲ್ಲಿ ಯುವಕ ಕೊನೆಯುಸಿರೆಳೆದಿದ್ದಾನೆ.