ಶಹಾಪುರ:ತಾಲ್ಲೂಕಿನ ಗೋಗಿ(ಕೆ) ಗ್ರಾಮದಲ್ಲಿ ಮಚ್ಚಿನಿಂದ ಹೊಡೆದು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿದೆ.
ಗ್ರಾಮದ ಕಾಸಿಂಸಾಬ್ ಚಂದಾಸಾಬ್ ಚೌದ್ರಿ(53) ಕೊಲೆಯಾದವರು.
ಬುಧವಾರ ಬೆಳಗಿನ ಜಾವಕಾಸಿಂಸಾಬ್ ಅವರುಪ್ರಾರ್ಥನೆ ಮಾಡಲು ಮಸೀದಿಗೆ ಹೋಗುತ್ತಿದ್ದಾಗ ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ, ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಪಿಐ ಶ್ರೀನಿವಾಸ ಅಲ್ಲಾಪುರೆ ನೇತೃತ್ವದಲ್ಲಿ ತನಿಖೆ ನಡೆದಿದೆ. ಗೋಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.