ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಲಾಪುರದಲ್ಲಿ ಭಕ್ತರ ದಂಡು

ಯುಗಾದಿ ಅಮಾವಾಸ್ಯೆಗೆ ಮಲ್ಲಯ್ಯನ ದರ್ಶನಕ್ಕೆ ಹರಿದು ಬಂದ ಭಕ್ತ ಸಮೂಹ
Last Updated 2 ಏಪ್ರಿಲ್ 2022, 2:12 IST
ಅಕ್ಷರ ಗಾತ್ರ

ಯಾದಗಿರಿ: ಯುಗಾದಿ ಅಮಾವಾಸ್ಯೆ ಅಂಗವಾಗಿ ತಾಲ್ಲೂಕಿನ ಮೈಲಾಪುರದ ಮೈಲಾರಲಿಂಗೇಶ್ವರನ ದರ್ಶನಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು.

ಹೊನ್ನಕೆರೆಯಲ್ಲಿ ಪುಣ್ಯಸ್ನಾನ ಮಾಡಿದರು. ಮೆಟ್ಟಿಲುಗಳನ್ನು ಹತ್ತಿ ಶ್ರದ್ಧಾ ಭಕ್ತಿಯಿಂದ ಸರದಿಯಲ್ಲಿ ನಿಂತು ಮಲ್ಲಯ್ಯನಿಗೆ ಜೈಕಾರ ಹಾಕಿ ಗದ್ದಲದ ನಡುವೆ ದರ್ಶನ ಪಡೆದರು.

ನೆರೆಯ ಆಂಧ್ರಪ್ರದೇಶದ ಶ್ರೀಶೈಲಂಗೆ ತೆರಳಿದ್ದ ಕಲ್ಯಾಣ ಕರ್ನಾಟಕ ಹಾಗೂ ಮಹಾರಾಷ್ಟ್ರದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದರು.

ಗ್ರಾಮೀಣ ಭಾಗದಿಂದ ಆಗಮಿಸಿದ ಭಕ್ತರು ಹೊನ್ನಕೆರೆಯ ಪಕ್ಕದಲ್ಲಿ ಮೀಸಲು ಅಡುಗೆ ಮಾಡಿ, ಮಲ್ಲಯ್ಯನಿಗೆ ನೈವೇದ್ಯ ಅರ್ಪಿಸಿ ಗುಂಪು-ಗುಂಪಾಗಿ ಕುಟುಂಬಸ್ಥರೊಂದಿಗೆ ಹಾಗೂ ಬಂಧುಗಳೊಂದಿಗೆ ಕುಳಿತು ಊಟ ಮಾಡಿ, ದಾಸೋಹ ಮಾಡುತ್ತಿರುವುದು ಸಾಮಾನ್ಯವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT