<p><strong>ಸುರಪುರ</strong>: ‘ರೈತರು ಬೆಳೆಗೆ ನ್ಯಾನೊ ಡಿಎಪಿ ಮತ್ತು ನ್ಯಾನೊ ರಸಗೊಬ್ಬರ ಬಳಕೆ ಮಾಡಬೇಕು’ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಾಮನಗೌಡ ಪಾಟೀಲ ಸಲಹೆ ನೀಡಿದರು.</p>.<p>ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ಇಲಾಖೆಯು ರೈತ ಸಂಪರ್ಕ ಕೇಂದ್ರಗಳ ಮೂಲಕ ಆತ್ಮಯೋಜನೆ ಅಡಿಯಲ್ಲಿ ನ್ಯಾನೊ ರಸಗೊಬ್ಬರ ಮತ್ತು ಸೂಕ್ಷ್ಮ ಪೋಷಕಾಂಶಗಳ ಬಳಕೆ ಕುರಿತು ಗ್ರಾಮ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘2025-26ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಕ್ಷೇತ್ರದಲ್ಲಿ ಶೇ 75ರಷ್ಟು ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಶೇ 25ರಷ್ಟು ಪ್ರದೇಶದಲ್ಲಿ ಭತ್ತ ನಾಟಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ.</p>.<p>ಈಗಾಗಲೇ ಬಿತ್ತನೆಯಾದ ಬೆಳೆಗೆ ಮೇಲು ಗೊಬ್ಬರವಾಗಿ ಯೂರಿಯಾ ಹಾಗೂ ಡಿಎಪಿ ರಸಗೊಬ್ಬರ ಬಳಸುವುದು ವಾಡಿಕೆಯಾಗಿದೆ. ಆದರೆ ವಿಶ್ವದಲ್ಲಿ ಯುದ್ದದ ಕಾರ್ಮೋಡ ಕವಿದಿರುವುದರಿಂದ ರಸಗೊಬ್ಬರ ತಯಾರಿಕೆ ಕಚ್ಚಾ ವಸ್ತುಗಳು ವಿದೇಶಗಳಿಂದ ಪೂರೈಕೆಯಾಗುತ್ತಿಲ್ಲ’ ಎಂದರು.</p>.<p>‘ನೂತನವಾಗಿ ಆವಿಷ್ಕರಿಸಲಾದ ನ್ಯಾನೊ ಯೂರಿಯಾ ಹಾಗೂ ನ್ಯಾನೊ ಡಿಎಪಿ ರಸಗೊಬ್ಬರಗಳನ್ನು ರೈತರು ಬಳಸಬಹುದು. ಕೀಟನಾಶಕ ಸಿಂಪಡಣೆ ಮಾಡುವಾಗ ಸದರಿ ದ್ರಾವಣಗಳನ್ನು ಸೇರ್ಪಡಿಸಿ ಸಿಂಪಡಿಸಿದಲ್ಲಿ ಖರ್ಚು, ವೆಚ್ಚ ತಗ್ಗಿಸಬಹುದು. ಕೃಷಿ ಪರಿಕರ ಮಾರಾಟಗಾರರಲ್ಲಿ ನ್ಯಾನೊ <br />ಯೂರಿಯಾ ಹಾಗೂ ನ್ಯಾನೊ ಡಿಎಪಿ ಲಭ್ಯವಿದ್ದು ಬಿತ್ತನೆಯಾದ 25-30 ದಿನ ಹಾಗೂ 40-50 ದಿನಗಳ ಅಂತರದಲ್ಲಿ ಸಿಂಪಡಣೆ ಮಾಡಬಹುದು. ಪ್ರತಿ ಲೀಟರ್ ನೀರಿಗೆ 5 ಎಂಎಲ್ ದ್ರಾವಣ ಬೆರಸಿ ಸಿಂಪಡಣೆ ಮಾಡಿದಲ್ಲಿ ಯೂರಿಯಾ ಹಾಗೂ ಡಿಎಪಿ ರಸಗೊಬ್ಬರದ ಫಲಿತಾಂಶವನ್ನು ದ್ರವರೂಪದ ರಸಗೊಬ್ಬರದಲ್ಲಿಯೂ ಕಾಣಬಹುದಾಗಿದೆ’ ಎಂದು ಹೇಳಿದರು. ಕೃಷಿ ಅಧಿಕಾರಿಗಳು, ಕಾರ್ಯತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ‘ರೈತರು ಬೆಳೆಗೆ ನ್ಯಾನೊ ಡಿಎಪಿ ಮತ್ತು ನ್ಯಾನೊ ರಸಗೊಬ್ಬರ ಬಳಕೆ ಮಾಡಬೇಕು’ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಾಮನಗೌಡ ಪಾಟೀಲ ಸಲಹೆ ನೀಡಿದರು.</p>.<p>ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ಇಲಾಖೆಯು ರೈತ ಸಂಪರ್ಕ ಕೇಂದ್ರಗಳ ಮೂಲಕ ಆತ್ಮಯೋಜನೆ ಅಡಿಯಲ್ಲಿ ನ್ಯಾನೊ ರಸಗೊಬ್ಬರ ಮತ್ತು ಸೂಕ್ಷ್ಮ ಪೋಷಕಾಂಶಗಳ ಬಳಕೆ ಕುರಿತು ಗ್ರಾಮ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘2025-26ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಕ್ಷೇತ್ರದಲ್ಲಿ ಶೇ 75ರಷ್ಟು ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಶೇ 25ರಷ್ಟು ಪ್ರದೇಶದಲ್ಲಿ ಭತ್ತ ನಾಟಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ.</p>.<p>ಈಗಾಗಲೇ ಬಿತ್ತನೆಯಾದ ಬೆಳೆಗೆ ಮೇಲು ಗೊಬ್ಬರವಾಗಿ ಯೂರಿಯಾ ಹಾಗೂ ಡಿಎಪಿ ರಸಗೊಬ್ಬರ ಬಳಸುವುದು ವಾಡಿಕೆಯಾಗಿದೆ. ಆದರೆ ವಿಶ್ವದಲ್ಲಿ ಯುದ್ದದ ಕಾರ್ಮೋಡ ಕವಿದಿರುವುದರಿಂದ ರಸಗೊಬ್ಬರ ತಯಾರಿಕೆ ಕಚ್ಚಾ ವಸ್ತುಗಳು ವಿದೇಶಗಳಿಂದ ಪೂರೈಕೆಯಾಗುತ್ತಿಲ್ಲ’ ಎಂದರು.</p>.<p>‘ನೂತನವಾಗಿ ಆವಿಷ್ಕರಿಸಲಾದ ನ್ಯಾನೊ ಯೂರಿಯಾ ಹಾಗೂ ನ್ಯಾನೊ ಡಿಎಪಿ ರಸಗೊಬ್ಬರಗಳನ್ನು ರೈತರು ಬಳಸಬಹುದು. ಕೀಟನಾಶಕ ಸಿಂಪಡಣೆ ಮಾಡುವಾಗ ಸದರಿ ದ್ರಾವಣಗಳನ್ನು ಸೇರ್ಪಡಿಸಿ ಸಿಂಪಡಿಸಿದಲ್ಲಿ ಖರ್ಚು, ವೆಚ್ಚ ತಗ್ಗಿಸಬಹುದು. ಕೃಷಿ ಪರಿಕರ ಮಾರಾಟಗಾರರಲ್ಲಿ ನ್ಯಾನೊ <br />ಯೂರಿಯಾ ಹಾಗೂ ನ್ಯಾನೊ ಡಿಎಪಿ ಲಭ್ಯವಿದ್ದು ಬಿತ್ತನೆಯಾದ 25-30 ದಿನ ಹಾಗೂ 40-50 ದಿನಗಳ ಅಂತರದಲ್ಲಿ ಸಿಂಪಡಣೆ ಮಾಡಬಹುದು. ಪ್ರತಿ ಲೀಟರ್ ನೀರಿಗೆ 5 ಎಂಎಲ್ ದ್ರಾವಣ ಬೆರಸಿ ಸಿಂಪಡಣೆ ಮಾಡಿದಲ್ಲಿ ಯೂರಿಯಾ ಹಾಗೂ ಡಿಎಪಿ ರಸಗೊಬ್ಬರದ ಫಲಿತಾಂಶವನ್ನು ದ್ರವರೂಪದ ರಸಗೊಬ್ಬರದಲ್ಲಿಯೂ ಕಾಣಬಹುದಾಗಿದೆ’ ಎಂದು ಹೇಳಿದರು. ಕೃಷಿ ಅಧಿಕಾರಿಗಳು, ಕಾರ್ಯತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>