ಕೊಡೇಕಲ್ಗೆ ಬರುವ ಸಂದರ್ಭದಲ್ಲಿ ಮಾರ್ಗಮಧ್ಯೆ ಡೋಣಿ ನದಿಯ ಸೇತುವೆ ಮೇಲೆ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದೆ. ಅದೃಷ್ಟವಷಾತ್ ಯಾವುದೇ ರೀತಿಯ ಪ್ರಾಣ ಹಾನಿ ಆಗಿಲ್ಲ. ಆದರೆ, ಸೇತುವೆ ಮೇಲಿಂದ ಡೋಣಿ ನದಿಯಲ್ಲಿ ಲಾರಿ ಬಿದ್ದ ಪರಿಣಾಮವಾಗಿ ಲಾರಿಯಲ್ಲಿದ್ದ ಸಿಲಿಂಡರ್ಗಳು ಚಲ್ಲಾಪಿಲ್ಲಿಯಾಗಿ ನೀರಿನಲ್ಲಿ ಬಿದ್ದಿವೆ. ಘಟನಾ ಸ್ಥಳಕ್ಕೆ ಪೊಲಿಸರು ಆಗಮಿಸಿ ಪರಿಶೀಲನೆ ನಡೆಸಿದರು. ಬೆಳಗಿನ ಜಾವ ಚಾಲಕ ನಿದ್ದೆ ಮಂಪರಿನಲ್ಲಿರುವುದೇ ಘಟನೆಗೆ ಕಾರಣ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.