ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1.68 ಲಕ್ಷ ಕ್ಯುಸೆಕ್ ನೀರು ಕೃಷ್ಣಾ ನದಿಗೆ

ಮತ್ತೆ ಹೆಚ್ಚಿದ ಒಳ ಹರಿವು 
Last Updated 27 ಸೆಪ್ಟೆಂಬರ್ 2019, 9:35 IST
ಅಕ್ಷರ ಗಾತ್ರ

ಹುಣಸಗಿ: ಕಳೆದ ಎರಡು ಮೂರು ದಿನಗಳಿಂದಲೂ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಮತ್ತೆ ಒಳ ಹರಿವು ದಾಖಲಾಗುತ್ತಿದ್ದು, ಗುರುವಾರ ಮತ್ತೆ ಒಳಹರಿವು ಹೆಚ್ಚಾಗಿದೆ.

ಕೃಷ್ಣಾ ನದಿ ಪಾತ್ರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗೆ ನೀರು ಹರಿದು ಬರುತ್ತಿದ್ದು, ಜಲಾಶಯದ ಮಟ್ಟ ಕಾಯ್ದುಕೊಂಡು ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಬುಧವಾರ ಬೆಳಿಗ್ಗೆ 35 ಸಾವಿರ ಕ್ಯುಸೆಕ್ ಇದ್ದ ಒಳಹರಿವು, ಸಂಜೆ 58 ಸಾವಿರ ಕ್ಯುಸೆಕ್ ಏರಿಕೆಯಾಗಿತ್ತು. ಗುರುವಾರ ಬೆಳಿಗ್ಗೆ 70 ಸಾವಿರ ಕ್ಯುಸೆಕ್‌ಗೆ ಏರಿಕೆಯಾಗಿತ್ತು. ಸಂಜೆ ಇನ್ನೂ ಹೆಚ್ಚಾಗಿದ್ದು 1.30 ಲಕ್ಷ ಕ್ಯುಸೆಕ್ ಒಳಹರಿವು ದಾಖಲಾಗಿದೆ. ಜಲಾಶಯದ ಮಟ್ಟ 492.23 ಕಾಯ್ದುಕೊಂಡು 15 ಗೇಟ್‌ಗಳ ಮೂಲಕ 1.68 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗಿದೆ ಎಂದು ಡ್ಯಾಂ ಡಿವಿಜನ್ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ ನಾಯ್ಕೋಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT