<p><strong>ಯರಗೋಳ: </strong>ಸಮೀಪದ ಅಲ್ಲಿಪುರ ಗ್ರಾಮದಲ್ಲಿ ಹಲವು ದಶಕಗಳಿಂದ ಮುಚ್ಚಿಹೋಗಿದ್ದ ತೆರೆದ ಬಾವಿಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಲಾಗಿತ್ತು. ಇದೀಗ ಬಾವಿಯಲ್ಲಿ ನೀರು ಚಿಮ್ಮಿದ್ದು ಗ್ರಾಮಸ್ಥರ ಮೊಗದಲ್ಲಿ ಸಂತಸ ಮೂಡಿದೆ.</p>.<p>ಗ್ರಾಮದ ಹೊರವಲಯದ ಕೆರೆಯ ಪಕ್ಕದಲ್ಲಿರುವ ದೊಡ್ಡದಾದ ‘ಊರ ಬಾವಿ’ಯಲ್ಲಿ ಹಲವು ದಶಕಗಳಿಂದ ಕಸ, ಕಡ್ಡಿ, ಕಲ್ಲು, ಮಣ್ಣು ತುಂಬಿಕೊಂಡಿತ್ತು. ಬಾವಿ ಸುತ್ತಲೂ ಖಾಲಿ ಜಾಗದಲ್ಲಿ ಗ್ರಾಮಸ್ಥರು ಅಕ್ರಮವಾಗಿ ತಿಪ್ಪೆ ಗುಂಡಿಗಳನ್ನು ನಿರ್ಮಿಸಿದ್ದರು.</p>.<p>ಯುವಕರ ಬೆಂಬಲದಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶರಣಪ್ಪ ಹಾಲಗೇರಿ ಇಚ್ಛಾಶಕ್ತಿಯಿಂದ ಉದ್ಯೋಗ ಖಾತ್ರಿ ಕಾಮಗಾರಿ ನಡೆಸಿ ಹಾಳು ಬಿದ್ದ ಬಾವಿಯನ್ನು ಸ್ವಚ್ಛಗೊಳಿಸಲಾಗಿದೆ. ಇದೀಗ ಬಾವಿಯಲ್ಲಿ ಮತ್ತೆ ನೀರು ಶೇಖರಣೆಗೊಂಡಿದೆ.</p>.<p>ಕೊರೊನಾ ಪರಿಣಾಮ ಗ್ರಾಮದಲ್ಲಿ ನಿರುದ್ಯೋಗಿ ಯುವಕರು ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಬಾವಿ ಸ್ವಚ್ಛಗೊಳಿಸುವ ಕೆಲಸದಲ್ಲಿ ತೊಡಗಿಸಿಕೊಂಡು ಮಾದರಿ ಕೆಲಸ ಮಾಡಿದ್ದನ್ನು ಕಂಡು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.</p>.<p>20 ಅಡಿ ಆಳ, 80 ಅಡಿ ಅಗಲ, 100 ಅಡಿ ಉದ್ದವಿರುವ ಬಾವಿಯನ್ನು ಸ್ವಚ್ಛಗೊಳಿಸಲು 784 ಮಾನವ ದಿನಗಳು, ಕಲ್ಲಿನ ಗೋಡೆ, ಮೆಟ್ಟಿಲು ನಿರ್ಮಾಣಕ್ಕೆ ₹7.84 ಲಕ್ಷ ಖರ್ಚು ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>‘ಪಂಚಾಯಿತಿ ಆಡಳಿತಾಧಿಕಾರಿ ಗ್ರಾಮಕ್ಕೆ ಆಗಮಿಸಿದಾಗ ಮುಚ್ಚಿದ ಬಾವಿಯನ್ನು ಗಮನಿಸಿ ಉದ್ಯೋಗ ಖಾತ್ರಿ ಕಾಮಗಾರಿಯಲ್ಲಿ ಸ್ವಚ್ಛಗೊಳಿಸುವಂತೆ ಸಲಹೆ ನೀಡಿದ್ದರು. ಅವರ ಮಾರ್ಗದರ್ಶನದಲ್ಲಿ ಬಾವಿ ಸ್ವಚ್ಛಗೊಳಿಸಿದ್ದು, ನೀರು ತುಂಬಿ ಹರಿಯುತ್ತಿದೆ’ ಎಂದು ಅಭಿವೃದ್ಧಿ ಅಧಿಕಾರಿ ಶರಣಪ್ಪ ಹಾಲಗೇರಿ ಸಂತಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯರಗೋಳ: </strong>ಸಮೀಪದ ಅಲ್ಲಿಪುರ ಗ್ರಾಮದಲ್ಲಿ ಹಲವು ದಶಕಗಳಿಂದ ಮುಚ್ಚಿಹೋಗಿದ್ದ ತೆರೆದ ಬಾವಿಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಲಾಗಿತ್ತು. ಇದೀಗ ಬಾವಿಯಲ್ಲಿ ನೀರು ಚಿಮ್ಮಿದ್ದು ಗ್ರಾಮಸ್ಥರ ಮೊಗದಲ್ಲಿ ಸಂತಸ ಮೂಡಿದೆ.</p>.<p>ಗ್ರಾಮದ ಹೊರವಲಯದ ಕೆರೆಯ ಪಕ್ಕದಲ್ಲಿರುವ ದೊಡ್ಡದಾದ ‘ಊರ ಬಾವಿ’ಯಲ್ಲಿ ಹಲವು ದಶಕಗಳಿಂದ ಕಸ, ಕಡ್ಡಿ, ಕಲ್ಲು, ಮಣ್ಣು ತುಂಬಿಕೊಂಡಿತ್ತು. ಬಾವಿ ಸುತ್ತಲೂ ಖಾಲಿ ಜಾಗದಲ್ಲಿ ಗ್ರಾಮಸ್ಥರು ಅಕ್ರಮವಾಗಿ ತಿಪ್ಪೆ ಗುಂಡಿಗಳನ್ನು ನಿರ್ಮಿಸಿದ್ದರು.</p>.<p>ಯುವಕರ ಬೆಂಬಲದಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶರಣಪ್ಪ ಹಾಲಗೇರಿ ಇಚ್ಛಾಶಕ್ತಿಯಿಂದ ಉದ್ಯೋಗ ಖಾತ್ರಿ ಕಾಮಗಾರಿ ನಡೆಸಿ ಹಾಳು ಬಿದ್ದ ಬಾವಿಯನ್ನು ಸ್ವಚ್ಛಗೊಳಿಸಲಾಗಿದೆ. ಇದೀಗ ಬಾವಿಯಲ್ಲಿ ಮತ್ತೆ ನೀರು ಶೇಖರಣೆಗೊಂಡಿದೆ.</p>.<p>ಕೊರೊನಾ ಪರಿಣಾಮ ಗ್ರಾಮದಲ್ಲಿ ನಿರುದ್ಯೋಗಿ ಯುವಕರು ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಬಾವಿ ಸ್ವಚ್ಛಗೊಳಿಸುವ ಕೆಲಸದಲ್ಲಿ ತೊಡಗಿಸಿಕೊಂಡು ಮಾದರಿ ಕೆಲಸ ಮಾಡಿದ್ದನ್ನು ಕಂಡು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.</p>.<p>20 ಅಡಿ ಆಳ, 80 ಅಡಿ ಅಗಲ, 100 ಅಡಿ ಉದ್ದವಿರುವ ಬಾವಿಯನ್ನು ಸ್ವಚ್ಛಗೊಳಿಸಲು 784 ಮಾನವ ದಿನಗಳು, ಕಲ್ಲಿನ ಗೋಡೆ, ಮೆಟ್ಟಿಲು ನಿರ್ಮಾಣಕ್ಕೆ ₹7.84 ಲಕ್ಷ ಖರ್ಚು ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>‘ಪಂಚಾಯಿತಿ ಆಡಳಿತಾಧಿಕಾರಿ ಗ್ರಾಮಕ್ಕೆ ಆಗಮಿಸಿದಾಗ ಮುಚ್ಚಿದ ಬಾವಿಯನ್ನು ಗಮನಿಸಿ ಉದ್ಯೋಗ ಖಾತ್ರಿ ಕಾಮಗಾರಿಯಲ್ಲಿ ಸ್ವಚ್ಛಗೊಳಿಸುವಂತೆ ಸಲಹೆ ನೀಡಿದ್ದರು. ಅವರ ಮಾರ್ಗದರ್ಶನದಲ್ಲಿ ಬಾವಿ ಸ್ವಚ್ಛಗೊಳಿಸಿದ್ದು, ನೀರು ತುಂಬಿ ಹರಿಯುತ್ತಿದೆ’ ಎಂದು ಅಭಿವೃದ್ಧಿ ಅಧಿಕಾರಿ ಶರಣಪ್ಪ ಹಾಲಗೇರಿ ಸಂತಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>