<p><strong>ನಾಯ್ಕಲ್ (ಯಾದಗಿರಿ):</strong> ನಗರ ಹೊರವಲಯದ ನಾಯ್ಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಛಾಯಾ ಅನಸುಗೂರ, ಉಪಾಧ್ಯಕ್ಷರಾಗಿ ಖಾಜಾ ಮೈನೋದ್ದೀನ್ ಆಯ್ಕೆಯಾದರು.</p>.<p>ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ನಡೆಯಿತು. ಅಧ್ಯಕ್ಷ ಸ್ಥಾನ ಎಸ್.ಸಿ (ಮಹಿಳೆ) ಮೀಸಲು ಆಗಿತ್ತು. ಛಾಯಾ ಅನಸುಗೂರ ಮತ್ತು ಮರೆಮ್ಮ ಮೈತ್ರೆ ನಾಮಪತ್ರ ಸಲ್ಲಿಸಿದ್ದರು. ಗುಪ್ತ ಮತದಾನ ನಡೆಯಿತು. ಛಾಯಾ ಅವರಿಗೆ 10 ಮತ ಪಡೆದು ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನ ಸಾಮಾನ್ಯ (ಪುರುಷ) ಆಗಿದ್ದರಿಂದ ಖಾಜಾ ಮೈನೋದ್ದೀನ್ ಮತ್ತು ದಾವೂದ್ ಇಬ್ಬರೂ ನಾಮಪತ್ರ ಸಲ್ಲಿಸಿದ್ದರು. ಖಾಜಾ ಮೈನೋದ್ದೀನ್ 10 ಮತಗಳನ್ನು ಪಡೆಯುವ ಮೂಲಕ ಉಪಾಧ್ಯಕ್ಷರಾಗಿ ಆಯ್ಕೆಯಾದರು.</p>.<p>ಪಂಚಾಯಿತಿಯ 17 ಜನ ಸದಸ್ಯರು ಉಪಸ್ಥಿತರಿದ್ದರು. ಜಿಲ್ಲಾ ಹಿಂದುಳಿದ ವರ್ಗ ಕಲ್ಯಾಣ ಅಧಿಕಾರಿಯಾದ ಚುನಾವಣಾಧಿಕಾರಿ ಪ್ರಭು ದೊರೆ ಅವರು ಅಧ್ಯಕ್ಷೆ ಹಾಗೂ ಉಪಾಧ್ಯಕ್ಷ ಆಯ್ಕೆ ಘೋಷಿಸಿದರು.</p>.<p>ಪಿಡಿಒ ಸುರೇಶ ಹಾಗೂ ಸಿಬ್ಬಂದಿ ಇದ್ದರು. ಯಾದಗಿರಿ ಡಿವೈಎಸ್ಪಿ ಸಂತೋಷ ಬನ್ನೇಟ್ಟಿ, ಸಿಪಿಐ ಸೋಮಶೇಖರ ಕೆಂಚರಡ್ಡಿ, ವಡಗೇರಾ ಠಾಣೆ ಪಿಎಸ್ಐ ಸಿದ್ದರಾಯ ಬಳ್ಳೂರ್ಗಿ, ಎಎಸ್ಐ ಹಾಗೂ ಪೊಲೀಸ್ ಸಿಬ್ಬಂದಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯ್ಕಲ್ (ಯಾದಗಿರಿ):</strong> ನಗರ ಹೊರವಲಯದ ನಾಯ್ಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಛಾಯಾ ಅನಸುಗೂರ, ಉಪಾಧ್ಯಕ್ಷರಾಗಿ ಖಾಜಾ ಮೈನೋದ್ದೀನ್ ಆಯ್ಕೆಯಾದರು.</p>.<p>ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ನಡೆಯಿತು. ಅಧ್ಯಕ್ಷ ಸ್ಥಾನ ಎಸ್.ಸಿ (ಮಹಿಳೆ) ಮೀಸಲು ಆಗಿತ್ತು. ಛಾಯಾ ಅನಸುಗೂರ ಮತ್ತು ಮರೆಮ್ಮ ಮೈತ್ರೆ ನಾಮಪತ್ರ ಸಲ್ಲಿಸಿದ್ದರು. ಗುಪ್ತ ಮತದಾನ ನಡೆಯಿತು. ಛಾಯಾ ಅವರಿಗೆ 10 ಮತ ಪಡೆದು ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನ ಸಾಮಾನ್ಯ (ಪುರುಷ) ಆಗಿದ್ದರಿಂದ ಖಾಜಾ ಮೈನೋದ್ದೀನ್ ಮತ್ತು ದಾವೂದ್ ಇಬ್ಬರೂ ನಾಮಪತ್ರ ಸಲ್ಲಿಸಿದ್ದರು. ಖಾಜಾ ಮೈನೋದ್ದೀನ್ 10 ಮತಗಳನ್ನು ಪಡೆಯುವ ಮೂಲಕ ಉಪಾಧ್ಯಕ್ಷರಾಗಿ ಆಯ್ಕೆಯಾದರು.</p>.<p>ಪಂಚಾಯಿತಿಯ 17 ಜನ ಸದಸ್ಯರು ಉಪಸ್ಥಿತರಿದ್ದರು. ಜಿಲ್ಲಾ ಹಿಂದುಳಿದ ವರ್ಗ ಕಲ್ಯಾಣ ಅಧಿಕಾರಿಯಾದ ಚುನಾವಣಾಧಿಕಾರಿ ಪ್ರಭು ದೊರೆ ಅವರು ಅಧ್ಯಕ್ಷೆ ಹಾಗೂ ಉಪಾಧ್ಯಕ್ಷ ಆಯ್ಕೆ ಘೋಷಿಸಿದರು.</p>.<p>ಪಿಡಿಒ ಸುರೇಶ ಹಾಗೂ ಸಿಬ್ಬಂದಿ ಇದ್ದರು. ಯಾದಗಿರಿ ಡಿವೈಎಸ್ಪಿ ಸಂತೋಷ ಬನ್ನೇಟ್ಟಿ, ಸಿಪಿಐ ಸೋಮಶೇಖರ ಕೆಂಚರಡ್ಡಿ, ವಡಗೇರಾ ಠಾಣೆ ಪಿಎಸ್ಐ ಸಿದ್ದರಾಯ ಬಳ್ಳೂರ್ಗಿ, ಎಎಸ್ಐ ಹಾಗೂ ಪೊಲೀಸ್ ಸಿಬ್ಬಂದಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>