ಯಾದಗಿರಿ: ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಶ್ರೀನಿವಾಸರೆಡ್ಡಿ ಶುಕ್ರವಾರ ಅಧಿಕಾರಸ್ವೀಕರಿಸಿದರು. ಕಳೆದ ಮೂರು ತಿಂಗಳಿನಿಂದ ಡಿಡಿಪಿಐ ಹುದ್ದೆ ಖಾಲಿಯಾಗಿ ಉಳಿದಿತ್ತು.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ನೂತನ ಡಿಡಿಪಿಐ, ಶುಕ್ರವಾರ ಅಧಿಕಾರ ಸ್ವೀಕರಿಸಿದ್ದೇನೆ. ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಭೇಟಿಯಾಗಿ ವರದಿ ಮಾಡಿದ್ದೇನೆ. ಒಂದು ವಾರದ ನಂತರ ಜಿಲ್ಲೆಯ ಶೈಕ್ಷಣಿಕ ಮಟ್ಟ ಸುಧಾರಿಸುವ ಬಗ್ಗೆ ಸಮಗ್ರ ವರದಿ ನೀಡುತ್ತೇನೆ ಎಂದು ತಿಳಿಸಿದರು.