ಶಿಸ್ತು ಕ್ರಮ: ‘ಭೀಮಾ ನದಿಗೆ ಹೆಚ್ಚಿನ ನೀರು ಹರಿಸುವ ಮಾಹಿತಿ ಇದ್ದರೂ ವಡಗೇರಾ ತಾಲ್ಲೂಕಿನ ಜೋಳದಡಗಿ ಬ್ರಿಜ್ ಕಂ ಬ್ಯಾರೇಜ್ನ ಗೇಟ್ಗಳನ್ನು ಕೆಬಿಜೆಎನ್ಎಲ್ ಅಧಿಕಾರಿಗಳು ತೆರೆದಿಲ್ಲ. ಇದರಿಂದ ಹಿನ್ನೀರು ಮತ್ತಷ್ಟು ವ್ಯಾಪಿಸಿ ಬೆಳೆ ಹಾನಿಯಾಗಿದೆ. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು’ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು.