<p><strong>ಯಾದಗಿರಿ</strong>: ಜಾರ್ಖಂಡ್ ರಾಜ್ಯದ ರಾಂಚಿಯಲ್ಲಿ ಬಂಧನಕ್ಕೊಳಗಾದ ಆರೋಪಿ ಫೈಯಾಜ್ ಜೊತೆ ಸಂಪರ್ಕ ಹೊಂದಿರುವ ಜಿಲ್ಲೆಯ ಶಹಾಪುರ ನಗರದ ಖಾಲೀದ್ ಅಹ್ಮದ್ ನಿವಾಸದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಂಡ ಗುರುವಾರ ದಾಳಿ ಮಾಡಿದೆ. </p><p>ರಾಂಚಿ ಪೊಲೀಸ್ ಠಾಣೆಯ ಆರೋಪಿ ಫೈಯಾಜ್ ಜೊತೆ ಇನ್ಸ್ಟಾಗ್ರಾಂ, ಫೇಸ್ಬುಕ್ನಲ್ಲಿ ಚಾಟ್ ಮಾಡುತ್ತಿದ್ದರಿಂದ ಶಂಕಿತ ಯುವಕನನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ. </p><p>ರಾಂಚಿ ಮೂಲದ ಎನ್ಐಎ ತಂಡ ಗುರುವಾರ ಬೆಳಗಿನ ಜಾವ 4 ಗಂಟೆಯಿಂದ 10 ಗಂಟೆಗೆ ವರೆಗೆ ಪರಿಶೀಲನೆ ನಡೆಸಿದೆ. ಅಲ್ಲದೇ ಶಂಕಿತ ಅಹ್ಮದ್ನ ಎರಡು ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ. </p><p>ಖಾಲೀದ್ ಅಹ್ಮದ್ನ ತೀವ್ರ ವಿಚಾರಣೆ ನಡೆಸಿದ ತಂಡ ಸೆ. 20 ರಂದು ಮತ್ತೆ ರಾಂಚಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.</p><p>ಮೊಬೈಲ್ ಜೊತೆಗೆ ಆಧಾರ್ ಕಾರ್ಡ್, ಪಾನ್ ಕಾರ್ಡ್, ರೇಷನ್ ಕಾರ್ಡ್ ಜಿರಾಕ್ಸ್ ಪ್ರತಿ ದಾಖಲೆಗಳನ್ನು ತೆಗೆದುಕೊಂಡು ಹೋಗಿದೆ. ಎನ್ಐಎ ತಂಡದಿಂದ ಖಾಲಿದ್ ವಿಚಾರಣೆ ಮುಕ್ತಾಯವಾಗಿದೆ.</p><p>ಶಂಕಿತ ಯುವಕ 22 ವರ್ಷದ ಖಾಲೀದ್ ಅಹ್ಮದ್ ಶಹಾಪುರದ ಗುತ್ತಿಪೇಟದಲ್ಲಿ ವಾಸವಾಗಿದ್ದಾನೆ. ಹಣ್ಣು ಮತ್ತು ಚಿಲ್ಲರೆ ವ್ಯಾಪಾರ ಜೊತೆ ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಜಾರ್ಖಂಡ್ ರಾಜ್ಯದ ರಾಂಚಿಯಲ್ಲಿ ಬಂಧನಕ್ಕೊಳಗಾದ ಆರೋಪಿ ಫೈಯಾಜ್ ಜೊತೆ ಸಂಪರ್ಕ ಹೊಂದಿರುವ ಜಿಲ್ಲೆಯ ಶಹಾಪುರ ನಗರದ ಖಾಲೀದ್ ಅಹ್ಮದ್ ನಿವಾಸದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಂಡ ಗುರುವಾರ ದಾಳಿ ಮಾಡಿದೆ. </p><p>ರಾಂಚಿ ಪೊಲೀಸ್ ಠಾಣೆಯ ಆರೋಪಿ ಫೈಯಾಜ್ ಜೊತೆ ಇನ್ಸ್ಟಾಗ್ರಾಂ, ಫೇಸ್ಬುಕ್ನಲ್ಲಿ ಚಾಟ್ ಮಾಡುತ್ತಿದ್ದರಿಂದ ಶಂಕಿತ ಯುವಕನನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ. </p><p>ರಾಂಚಿ ಮೂಲದ ಎನ್ಐಎ ತಂಡ ಗುರುವಾರ ಬೆಳಗಿನ ಜಾವ 4 ಗಂಟೆಯಿಂದ 10 ಗಂಟೆಗೆ ವರೆಗೆ ಪರಿಶೀಲನೆ ನಡೆಸಿದೆ. ಅಲ್ಲದೇ ಶಂಕಿತ ಅಹ್ಮದ್ನ ಎರಡು ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ. </p><p>ಖಾಲೀದ್ ಅಹ್ಮದ್ನ ತೀವ್ರ ವಿಚಾರಣೆ ನಡೆಸಿದ ತಂಡ ಸೆ. 20 ರಂದು ಮತ್ತೆ ರಾಂಚಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.</p><p>ಮೊಬೈಲ್ ಜೊತೆಗೆ ಆಧಾರ್ ಕಾರ್ಡ್, ಪಾನ್ ಕಾರ್ಡ್, ರೇಷನ್ ಕಾರ್ಡ್ ಜಿರಾಕ್ಸ್ ಪ್ರತಿ ದಾಖಲೆಗಳನ್ನು ತೆಗೆದುಕೊಂಡು ಹೋಗಿದೆ. ಎನ್ಐಎ ತಂಡದಿಂದ ಖಾಲಿದ್ ವಿಚಾರಣೆ ಮುಕ್ತಾಯವಾಗಿದೆ.</p><p>ಶಂಕಿತ ಯುವಕ 22 ವರ್ಷದ ಖಾಲೀದ್ ಅಹ್ಮದ್ ಶಹಾಪುರದ ಗುತ್ತಿಪೇಟದಲ್ಲಿ ವಾಸವಾಗಿದ್ದಾನೆ. ಹಣ್ಣು ಮತ್ತು ಚಿಲ್ಲರೆ ವ್ಯಾಪಾರ ಜೊತೆ ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>