<p><strong>ಕೆಂಭಾವಿ:</strong> ವಲಯದ ಹಲವು ಹಳ್ಳಿಗಳಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿ ಕೆಲ ಜಾತಿ ಜನಾಂಗದವರು ಪರಿಶಿಷ್ಠ ಜಾತಿ ಬೇಡ ಜಂಗಮ ಪ್ರಮಾಣ ಪತ್ರ ಪಡೆಯುತ್ತಿದ್ದು, ಅಂಥವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಆಗ್ರಹಿಸಿದೆ.</p>.<p>ಈ ಕುರಿತು ಸಂಘಟನೆಯ ವಲಯ ಘಟಕದ ಅಧ್ಯಕ್ಷ ಪರಶುರಾಮ ಬೋನಾಳ ಮಾತನಾಡಿ, ‘ಕೆಂಭಾವಿ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಕೆಲ ಮೇಲ್ಜಾತಿ ಜನಾಂಗದವರು ಪರಿಶಿಷ್ಠ ಜಾತಿ ಬೇಡ ಜಂಗಮ ಪ್ರಮಾಣ ಪತ್ರ ಪಡೆದು ಸರ್ಕಾರಕ್ಕೆ ವಂಚಿಸುತ್ತಿದ್ದಾರೆ. ಈ ಕಾರ್ಯದಲ್ಲಿ ಕಂದಾಯ ಇಲಾಖೆಯ ಹಲವು ಅಧಿಕಾರಿಗಳೂ ಭಾಗಿಯಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರಮಾಣಪತ್ರವನ್ನು ರದ್ದು ಮಾಡಿ ಮುಂದೆ ಈ ರೀತಿ ಆಗದಂತೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಉಪತಹಶೀಲ್ದಾರ್ ಪ್ರವೀಣಕುಮಾರ ಸಜ್ಜನ್ ಅವರಿಗೆ ಸಲ್ಲಿಸಲಾಯಿತು.</p>.<p>ಪರಶುರಾಮ ಕಟ್ಟಿಮನಿ, ರವಿ ಮಾಳಳ್ಳಿಕರ್, ರಾಮು ಯಾಳಗಿ, ಸಿದ್ದಪ್ಪ ಮಾಳಳ್ಳಿ, ಸಾಯಬಣ್ಣ ಕೊಡಗಾನೂರ, ಸಮೀರ, ಬಸವರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ:</strong> ವಲಯದ ಹಲವು ಹಳ್ಳಿಗಳಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿ ಕೆಲ ಜಾತಿ ಜನಾಂಗದವರು ಪರಿಶಿಷ್ಠ ಜಾತಿ ಬೇಡ ಜಂಗಮ ಪ್ರಮಾಣ ಪತ್ರ ಪಡೆಯುತ್ತಿದ್ದು, ಅಂಥವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಆಗ್ರಹಿಸಿದೆ.</p>.<p>ಈ ಕುರಿತು ಸಂಘಟನೆಯ ವಲಯ ಘಟಕದ ಅಧ್ಯಕ್ಷ ಪರಶುರಾಮ ಬೋನಾಳ ಮಾತನಾಡಿ, ‘ಕೆಂಭಾವಿ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಕೆಲ ಮೇಲ್ಜಾತಿ ಜನಾಂಗದವರು ಪರಿಶಿಷ್ಠ ಜಾತಿ ಬೇಡ ಜಂಗಮ ಪ್ರಮಾಣ ಪತ್ರ ಪಡೆದು ಸರ್ಕಾರಕ್ಕೆ ವಂಚಿಸುತ್ತಿದ್ದಾರೆ. ಈ ಕಾರ್ಯದಲ್ಲಿ ಕಂದಾಯ ಇಲಾಖೆಯ ಹಲವು ಅಧಿಕಾರಿಗಳೂ ಭಾಗಿಯಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರಮಾಣಪತ್ರವನ್ನು ರದ್ದು ಮಾಡಿ ಮುಂದೆ ಈ ರೀತಿ ಆಗದಂತೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಉಪತಹಶೀಲ್ದಾರ್ ಪ್ರವೀಣಕುಮಾರ ಸಜ್ಜನ್ ಅವರಿಗೆ ಸಲ್ಲಿಸಲಾಯಿತು.</p>.<p>ಪರಶುರಾಮ ಕಟ್ಟಿಮನಿ, ರವಿ ಮಾಳಳ್ಳಿಕರ್, ರಾಮು ಯಾಳಗಿ, ಸಿದ್ದಪ್ಪ ಮಾಳಳ್ಳಿ, ಸಾಯಬಣ್ಣ ಕೊಡಗಾನೂರ, ಸಮೀರ, ಬಸವರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>