<p>ವಡಗೇರಾ: ತಾಲ್ಲೂಕಿನಾದ್ಯಂತ ಬಹುತೇಕ ಗ್ರಾಮದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದ್ದು, ಪಾಲಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ.</p>.<p>ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಮಕ್ಕಳು ಬಿಸಿಯೂಟ ಮಾಡಿದ ಮೇಲೆ ನೀರಿಗಾಗಿ ಪಕ್ಕದ ತಹಶೀಲ್ದಾರ್ ಕಚೇರಿಇಲ್ಲವೇಕೊಳವೆಬಾವಿ ಇದ್ದ ಕಡೆಅಲೆದಾಡುವ ಪರಿಸ್ಥಿತಿ ಇದೆ. ಇಲ್ಲದಿದ್ದರೆ ವಿದ್ಯಾರ್ಥಿಗಳು ಮನೆಯಿಂದಲೇನೀರು ತರಬೇಕು.</p>.<p>ತಾಲ್ಲೂಕಿನ ಮಾಚನೂರ ಗ್ರಾಮದಲ್ಲಿ ಶೌಚಾಲಯ ಕೊರತೆ ಇದ್ದು, ಶಾಲೆಯು ಗ್ರಾಮದ ಮಧ್ಯದಲ್ಲಿ ಇರುವುದರಿಂದ ವಿದ್ಯಾರ್ಥಿಗಳು ಶೌಚ ಮಾಡಲು ತೊಂದರೆ ಅನುಭವಿಸುತ್ತಿದ್ದಾರೆ. ಅದರಂತೆ ತಾಲ್ಲೂಕಿನ ಬಹುತೇಕ ಗ್ರಾಮದ ಶಾಲೆಗಳಲ್ಲಿ ಶೌಚಾಲಯದ ಕೊರತೆ ಇದೆ.</p>.<p>ವಡಗೇರಾ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ 262 ವಿದ್ಯಾರ್ಥಿಗಳಿಗೆ ಕೇವಲ ಇಬ್ಬರು ಶಿಕ್ಷರು ಮಾತ್ರ ಇದ್ದಾರೆ. ಉಳಿದ ಮೂವರನ್ನು ಅತಿಥಿ ಶಿಕ್ಷಕರನ್ನು ತೆಗೆದುಕೊಂಡು ಶಾಲೆಯನ್ನು ನಡೆಸುವಂತ ಪರಿಸ್ಥಿತಿ ಎದುರಾಗಿದೆ. ಈ ಶಾಲೆಯಲ್ಲಿ ಇಂಗ್ಲಿಷ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಇದೆ. ಬಹುತೇಕ ಗ್ರಾಮಗಳ ಶಾಲೆಗಳಲ್ಲಿಯೂ ಶಿಕ್ಷಕರ ಕೊರತೆ ಇದೆ.</p>.<p>ವಡಗೇರಾ ತಾಲ್ಲೂಕುಕೇಂದ್ರವಾಗಿ ಸುಮಾರು ಐದು ವರ್ಷಗಳ ಕಾಲ ಕಳೆಯುತ್ತಾ ಬಂದರೂಇಲ್ಲಿಯವರೆಗೆ ಒಂದೇ ಒಂದೂಪಿಯು ಕಾಲೇಜು ತೆಗೆದಿಲ್ಲ. ಇದರಿಂದ ಕೆಲವು ವಿದ್ಯಾರ್ಥಿಗಳು ದೂರದ ನಗರಗಳಿಗೆ ತೆರಳದೇ ತಮ್ಮ ವಿದ್ಯಾಭ್ಯಾಸವನ್ನು ಅಂತ್ಯಗೊಳಿಸಿದ್ದಾರೆ. ಪಟ್ಟಣದಲ್ಲಿ ಮತ್ತು ಬೆಂಡೆಬೆಂಬಳಿ ಗ್ರಾಮದಲ್ಲಿ ಆದೇಶವಾಗಿದ್ದ ಕಾಲೇಜುಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಿ ಈ ಭಾಗದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಫಕೀರ್ ಅಹ್ಮದ್ ಮರಡಿ ಆರೋಪಿಸಿದ್ದಾರೆ.</p>.<p>‘ಇಡೀ ರಾಜ್ಯದಲ್ಲೇ ಅತಿ ಹೆಚ್ಚು ಶಿಕ್ಷಕರಕೊರತೆಇರುವುದು ವಡಗೇರಾ ತಾಲ್ಲೂಕಿನಲ್ಲಿ. ಇದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣದ ಕೊರತೆ ಉಂಟಾಗುತ್ತಿದೆ. ಎಲ್ಲಾ ಶಾಲೆಯಲ್ಲಿ ಎಲ್ಲಾ ಶಿಕ್ಷಕರನ್ನು ನೇಮಕ ಮಾಡಬೇಕು’ ಎಂದು ಪಟ್ಟಣ ನಿವಾಸಿ ಅಬ್ದುಲ್ ಚಿಗಾನೂರ ಆಗ್ರಹಿಸಿದ್ದಾರೆ.</p>.<p>*ಶಾಲೆಯಲ್ಲಿ ಶೌಚಾಲಯದ ಸಮಸ್ಯೆ ಇದೆ. ಈಗಾಗಲೇ ಎರಡು ಶೌಚಾಲಯ ನಿರ್ಮಾಣ ಮಾಡಲಾಗಿದೆ. ಆದರೆ, ಅವು ಹದಗೆಟ್ಟಿವೆ. ಗ್ರಾ.ಪಂ ಆಡಳಿತ ಅವುಗಳನ್ನು ದುರಸ್ತಿ ಮಾಡಿ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು</p>.<p>- ಮಲ್ಲಣ್ಣಗೌಡ ಬಿ.ಪಾಟೀಲ, ಮಾಚನೂರ ಶಾಲೆ ಮುಖ್ಯಶಿಕ್ಷಕ</p>.<p>*ವಡಗೇರಾ ತಾಲ್ಲೂಕಿನಲ್ಲಿ ಶಿಕ್ಷಕರ ಕೊರತೆ ಕುರಿತು ಈಗಾಗಲೇ ಪ್ರಾದೇಶಿಕ ಆಯುಕ್ತರು, ಮುಖ್ಯ ಆಯುಕ್ತರು ಮಾಹಿತಿ ಪಡೆದಿದ್ದಾರೆ. ಮುಂದಿನ ದಿನದಲ್ಲಿ ಕಲ್ಯಾಣ ಕರ್ನಾಟಕ ವಿಭಾಗದ ನೇಮಕಾತಿಯಲ್ಲಿ ನೇಮಕ ಮಾಡಿಕೊಳ್ಳುತ್ತೇವೆ</p>.<p>- ರುದ್ರಗೌಡ ಪಾಟೀಲ, ಶಹಾಪುರ ಕ್ಷೇತ್ರ ಶಿಕ್ಷಣಾಧಿಕಾರಿ</p>.<p>*ಈ ಭಾಗಕ್ಕೆ ಪಿಯುಸಿ ಕಾಲೇಜು ಅತಿ ಮುಖ್ಯವಾಗಿಬೇಕಾಗಿದೆ. ಅಂತರದಲ್ಲಿ ಈ ಭಾಗದ ಎರಡು ಕಾಲೇಜುಗಳನ್ನು ಸ್ಥಳಾಂತರ ಮಾಡಿದ್ದು ದುರದೃಷ್ಟ. ಶೀಘ್ರವೇ ಪಿಯುಸಿ ಕಾಲೇಜು ಆರಂಭ ಮಾಡಬೇಕು<br />- ಹನುಮೇಗೌಡ ಬೀರನಕಲ್, ಜೆಡಿಎಸ್ ಮುಖಂಡ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಡಗೇರಾ: ತಾಲ್ಲೂಕಿನಾದ್ಯಂತ ಬಹುತೇಕ ಗ್ರಾಮದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದ್ದು, ಪಾಲಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ.</p>.<p>ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಮಕ್ಕಳು ಬಿಸಿಯೂಟ ಮಾಡಿದ ಮೇಲೆ ನೀರಿಗಾಗಿ ಪಕ್ಕದ ತಹಶೀಲ್ದಾರ್ ಕಚೇರಿಇಲ್ಲವೇಕೊಳವೆಬಾವಿ ಇದ್ದ ಕಡೆಅಲೆದಾಡುವ ಪರಿಸ್ಥಿತಿ ಇದೆ. ಇಲ್ಲದಿದ್ದರೆ ವಿದ್ಯಾರ್ಥಿಗಳು ಮನೆಯಿಂದಲೇನೀರು ತರಬೇಕು.</p>.<p>ತಾಲ್ಲೂಕಿನ ಮಾಚನೂರ ಗ್ರಾಮದಲ್ಲಿ ಶೌಚಾಲಯ ಕೊರತೆ ಇದ್ದು, ಶಾಲೆಯು ಗ್ರಾಮದ ಮಧ್ಯದಲ್ಲಿ ಇರುವುದರಿಂದ ವಿದ್ಯಾರ್ಥಿಗಳು ಶೌಚ ಮಾಡಲು ತೊಂದರೆ ಅನುಭವಿಸುತ್ತಿದ್ದಾರೆ. ಅದರಂತೆ ತಾಲ್ಲೂಕಿನ ಬಹುತೇಕ ಗ್ರಾಮದ ಶಾಲೆಗಳಲ್ಲಿ ಶೌಚಾಲಯದ ಕೊರತೆ ಇದೆ.</p>.<p>ವಡಗೇರಾ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ 262 ವಿದ್ಯಾರ್ಥಿಗಳಿಗೆ ಕೇವಲ ಇಬ್ಬರು ಶಿಕ್ಷರು ಮಾತ್ರ ಇದ್ದಾರೆ. ಉಳಿದ ಮೂವರನ್ನು ಅತಿಥಿ ಶಿಕ್ಷಕರನ್ನು ತೆಗೆದುಕೊಂಡು ಶಾಲೆಯನ್ನು ನಡೆಸುವಂತ ಪರಿಸ್ಥಿತಿ ಎದುರಾಗಿದೆ. ಈ ಶಾಲೆಯಲ್ಲಿ ಇಂಗ್ಲಿಷ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಇದೆ. ಬಹುತೇಕ ಗ್ರಾಮಗಳ ಶಾಲೆಗಳಲ್ಲಿಯೂ ಶಿಕ್ಷಕರ ಕೊರತೆ ಇದೆ.</p>.<p>ವಡಗೇರಾ ತಾಲ್ಲೂಕುಕೇಂದ್ರವಾಗಿ ಸುಮಾರು ಐದು ವರ್ಷಗಳ ಕಾಲ ಕಳೆಯುತ್ತಾ ಬಂದರೂಇಲ್ಲಿಯವರೆಗೆ ಒಂದೇ ಒಂದೂಪಿಯು ಕಾಲೇಜು ತೆಗೆದಿಲ್ಲ. ಇದರಿಂದ ಕೆಲವು ವಿದ್ಯಾರ್ಥಿಗಳು ದೂರದ ನಗರಗಳಿಗೆ ತೆರಳದೇ ತಮ್ಮ ವಿದ್ಯಾಭ್ಯಾಸವನ್ನು ಅಂತ್ಯಗೊಳಿಸಿದ್ದಾರೆ. ಪಟ್ಟಣದಲ್ಲಿ ಮತ್ತು ಬೆಂಡೆಬೆಂಬಳಿ ಗ್ರಾಮದಲ್ಲಿ ಆದೇಶವಾಗಿದ್ದ ಕಾಲೇಜುಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಿ ಈ ಭಾಗದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಫಕೀರ್ ಅಹ್ಮದ್ ಮರಡಿ ಆರೋಪಿಸಿದ್ದಾರೆ.</p>.<p>‘ಇಡೀ ರಾಜ್ಯದಲ್ಲೇ ಅತಿ ಹೆಚ್ಚು ಶಿಕ್ಷಕರಕೊರತೆಇರುವುದು ವಡಗೇರಾ ತಾಲ್ಲೂಕಿನಲ್ಲಿ. ಇದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣದ ಕೊರತೆ ಉಂಟಾಗುತ್ತಿದೆ. ಎಲ್ಲಾ ಶಾಲೆಯಲ್ಲಿ ಎಲ್ಲಾ ಶಿಕ್ಷಕರನ್ನು ನೇಮಕ ಮಾಡಬೇಕು’ ಎಂದು ಪಟ್ಟಣ ನಿವಾಸಿ ಅಬ್ದುಲ್ ಚಿಗಾನೂರ ಆಗ್ರಹಿಸಿದ್ದಾರೆ.</p>.<p>*ಶಾಲೆಯಲ್ಲಿ ಶೌಚಾಲಯದ ಸಮಸ್ಯೆ ಇದೆ. ಈಗಾಗಲೇ ಎರಡು ಶೌಚಾಲಯ ನಿರ್ಮಾಣ ಮಾಡಲಾಗಿದೆ. ಆದರೆ, ಅವು ಹದಗೆಟ್ಟಿವೆ. ಗ್ರಾ.ಪಂ ಆಡಳಿತ ಅವುಗಳನ್ನು ದುರಸ್ತಿ ಮಾಡಿ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು</p>.<p>- ಮಲ್ಲಣ್ಣಗೌಡ ಬಿ.ಪಾಟೀಲ, ಮಾಚನೂರ ಶಾಲೆ ಮುಖ್ಯಶಿಕ್ಷಕ</p>.<p>*ವಡಗೇರಾ ತಾಲ್ಲೂಕಿನಲ್ಲಿ ಶಿಕ್ಷಕರ ಕೊರತೆ ಕುರಿತು ಈಗಾಗಲೇ ಪ್ರಾದೇಶಿಕ ಆಯುಕ್ತರು, ಮುಖ್ಯ ಆಯುಕ್ತರು ಮಾಹಿತಿ ಪಡೆದಿದ್ದಾರೆ. ಮುಂದಿನ ದಿನದಲ್ಲಿ ಕಲ್ಯಾಣ ಕರ್ನಾಟಕ ವಿಭಾಗದ ನೇಮಕಾತಿಯಲ್ಲಿ ನೇಮಕ ಮಾಡಿಕೊಳ್ಳುತ್ತೇವೆ</p>.<p>- ರುದ್ರಗೌಡ ಪಾಟೀಲ, ಶಹಾಪುರ ಕ್ಷೇತ್ರ ಶಿಕ್ಷಣಾಧಿಕಾರಿ</p>.<p>*ಈ ಭಾಗಕ್ಕೆ ಪಿಯುಸಿ ಕಾಲೇಜು ಅತಿ ಮುಖ್ಯವಾಗಿಬೇಕಾಗಿದೆ. ಅಂತರದಲ್ಲಿ ಈ ಭಾಗದ ಎರಡು ಕಾಲೇಜುಗಳನ್ನು ಸ್ಥಳಾಂತರ ಮಾಡಿದ್ದು ದುರದೃಷ್ಟ. ಶೀಘ್ರವೇ ಪಿಯುಸಿ ಕಾಲೇಜು ಆರಂಭ ಮಾಡಬೇಕು<br />- ಹನುಮೇಗೌಡ ಬೀರನಕಲ್, ಜೆಡಿಎಸ್ ಮುಖಂಡ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>