<p><strong>ಯಾದಗಿರಿ: </strong>ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದೆ. ರೈತರಿಗೆ ರಿಯಾಯಿತಿ ದರದಲ್ಲಿ ವಿತರಿಸುವ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಕೊರತೆ ಆಗದಂತೆ ಕೃಷಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ 2020-21ನೇ ಸಾಲಿನ ಮುಂಗಾರು ಹಂಗಾಮಿನ ಸನ್ನದ್ಧತೆ ಹಾಗೂ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಪೂರ್ವಸಿದ್ಧತೆ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲೆಯ 16 ಹೋಬಳಿಗಳಲ್ಲಿರುವ ರೈತ ಸಂಪರ್ಕ ಕೇಂದ್ರಗಳು ಮತ್ತು 6 ಹೆಚ್ಚುವರಿ ಕೇಂದ್ರಗಳ ಮೂಲಕ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ವಿತರಿಸಬೇಕು. ಬಿತ್ತನೆ ಬೀಜ ಬೇಡಿಕೆ ಹೆಚ್ಚಿರುವ ಹೋಬಳಿಗಳ ವ್ಯಾಪ್ತಿಯಲ್ಲಿ ಆದ್ಯತೆ ಮೇರೆಗೆ ಇನ್ನಷ್ಟು ಹೆಚ್ಚುವರಿ ಕೇಂದ್ರಗಳನ್ನು ತೆರೆಯಬೇಕು ಎಂದು ನಿರ್ದೇಶಿಸಿದರು.</p>.<p>ಜಿಲ್ಲೆಯಲ್ಲಿ ಸಾರ್ವಜನಿಕ ಸೇವೆ ನೀಡುವ ಮತ್ತು ಹೆಚ್ಚಿನ ಜನರ ಓಡಾಟ ಇರುವಂತಹ ಆರ್.ಟಿ.ಒ ಕಚೇರಿ, ನಾಡಕಚೇರಿಗಳು, ರೈತ ಸಂಪರ್ಕ ಕೇಂದ್ರಗಳು, ಉಪ ನೋಂದಣಾಧಿಕಾರಿ ಕಚೇರಿ, ಕರ್ನಾಟಕ ಒನ್ ಹಾಗೂ ಬ್ಯಾಂಕ್ಗಳ ಮುಂದೆ ಕೋವಿಡ್-19 ಸಂಬಂಧ ಅಂತರ ಕಾಪಾಡುವ ನಿಟ್ಟಿನಲ್ಲಿ ಬ್ಯಾರಿಕೇಡ್ ಅಳವಡಿಸಬೇಕು. ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ಸಿಬ್ಬಂದಿ ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.</p>.<p>ಜಂಟಿ ಕೃಷಿ ನಿರ್ದೇಶಕಿದೇವಿಕಾ ಆರ್. ಮಾತನಾಡಿ, ಜೂನ್ 1ರಂದು ಮುಂಗಾರು ಆರಂಭವಾಗಿದೆ. 2 ದಿನಗಳಲ್ಲಿ ವಾಡಿಕೆ 5 ಮಿ.ಮೀ ಮಳೆಗಿಂತ ಹೆಚ್ಚಿನ ಮಳೆ (22 ಮಿ.ಮೀ) ಸುರಿದಿದೆ. ಜಿಲ್ಲೆಯಲ್ಲಿ 2,90,897 ಹೆಕ್ಟೇರ್ ಪ್ರದೇಶ ಬಿತ್ತನೆ ಗುರಿ ಹೊಂದಿದ್ದು, ಈಗಾಗಲೇ ಹೆಸರು ಬಿತ್ತನೆ ಆರಂಭವಾಗಿದೆ. ಕೋವಿಡ್-19 ಸಂಬಂಧ ಮುಂಜಾಗ್ರತಾ ಕ್ರಮಗಳೊಂದಿಗೆ ರಿಯಾಯಿತಿ ದರದ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಇಲ್ಲ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.</p>.<p>***</p>.<p>ಅನಧಿಕೃತವಾಗಿ ಹತ್ತಿ ಬೀಜ ಹಾಗೂ ಇನ್ನಿತರೆ ಬಿತ್ತನೆ ಬೀಜಗಳ ಮಾರಾಟ ಕಂಡುಬಂದಲ್ಲಿ ಜಾಗೃತದಳಗಳ ಮೂಲಕ ದಾಳಿ ನಡೆಸಿ, ಪ್ರಕರಣ ದಾಖಲಿಸಬೇಕು</p>.<p>ಎಂ.ಕೂರ್ಮಾರಾವ್,ಜಿಲ್ಲಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದೆ. ರೈತರಿಗೆ ರಿಯಾಯಿತಿ ದರದಲ್ಲಿ ವಿತರಿಸುವ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಕೊರತೆ ಆಗದಂತೆ ಕೃಷಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ 2020-21ನೇ ಸಾಲಿನ ಮುಂಗಾರು ಹಂಗಾಮಿನ ಸನ್ನದ್ಧತೆ ಹಾಗೂ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಪೂರ್ವಸಿದ್ಧತೆ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲೆಯ 16 ಹೋಬಳಿಗಳಲ್ಲಿರುವ ರೈತ ಸಂಪರ್ಕ ಕೇಂದ್ರಗಳು ಮತ್ತು 6 ಹೆಚ್ಚುವರಿ ಕೇಂದ್ರಗಳ ಮೂಲಕ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ವಿತರಿಸಬೇಕು. ಬಿತ್ತನೆ ಬೀಜ ಬೇಡಿಕೆ ಹೆಚ್ಚಿರುವ ಹೋಬಳಿಗಳ ವ್ಯಾಪ್ತಿಯಲ್ಲಿ ಆದ್ಯತೆ ಮೇರೆಗೆ ಇನ್ನಷ್ಟು ಹೆಚ್ಚುವರಿ ಕೇಂದ್ರಗಳನ್ನು ತೆರೆಯಬೇಕು ಎಂದು ನಿರ್ದೇಶಿಸಿದರು.</p>.<p>ಜಿಲ್ಲೆಯಲ್ಲಿ ಸಾರ್ವಜನಿಕ ಸೇವೆ ನೀಡುವ ಮತ್ತು ಹೆಚ್ಚಿನ ಜನರ ಓಡಾಟ ಇರುವಂತಹ ಆರ್.ಟಿ.ಒ ಕಚೇರಿ, ನಾಡಕಚೇರಿಗಳು, ರೈತ ಸಂಪರ್ಕ ಕೇಂದ್ರಗಳು, ಉಪ ನೋಂದಣಾಧಿಕಾರಿ ಕಚೇರಿ, ಕರ್ನಾಟಕ ಒನ್ ಹಾಗೂ ಬ್ಯಾಂಕ್ಗಳ ಮುಂದೆ ಕೋವಿಡ್-19 ಸಂಬಂಧ ಅಂತರ ಕಾಪಾಡುವ ನಿಟ್ಟಿನಲ್ಲಿ ಬ್ಯಾರಿಕೇಡ್ ಅಳವಡಿಸಬೇಕು. ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ಸಿಬ್ಬಂದಿ ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.</p>.<p>ಜಂಟಿ ಕೃಷಿ ನಿರ್ದೇಶಕಿದೇವಿಕಾ ಆರ್. ಮಾತನಾಡಿ, ಜೂನ್ 1ರಂದು ಮುಂಗಾರು ಆರಂಭವಾಗಿದೆ. 2 ದಿನಗಳಲ್ಲಿ ವಾಡಿಕೆ 5 ಮಿ.ಮೀ ಮಳೆಗಿಂತ ಹೆಚ್ಚಿನ ಮಳೆ (22 ಮಿ.ಮೀ) ಸುರಿದಿದೆ. ಜಿಲ್ಲೆಯಲ್ಲಿ 2,90,897 ಹೆಕ್ಟೇರ್ ಪ್ರದೇಶ ಬಿತ್ತನೆ ಗುರಿ ಹೊಂದಿದ್ದು, ಈಗಾಗಲೇ ಹೆಸರು ಬಿತ್ತನೆ ಆರಂಭವಾಗಿದೆ. ಕೋವಿಡ್-19 ಸಂಬಂಧ ಮುಂಜಾಗ್ರತಾ ಕ್ರಮಗಳೊಂದಿಗೆ ರಿಯಾಯಿತಿ ದರದ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಇಲ್ಲ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.</p>.<p>***</p>.<p>ಅನಧಿಕೃತವಾಗಿ ಹತ್ತಿ ಬೀಜ ಹಾಗೂ ಇನ್ನಿತರೆ ಬಿತ್ತನೆ ಬೀಜಗಳ ಮಾರಾಟ ಕಂಡುಬಂದಲ್ಲಿ ಜಾಗೃತದಳಗಳ ಮೂಲಕ ದಾಳಿ ನಡೆಸಿ, ಪ್ರಕರಣ ದಾಖಲಿಸಬೇಕು</p>.<p>ಎಂ.ಕೂರ್ಮಾರಾವ್,ಜಿಲ್ಲಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>