ಜಿಲ್ಲೆಯಲ್ಲಿ ಸಾರ್ವಜನಿಕ ಸೇವೆ ನೀಡುವ ಮತ್ತು ಹೆಚ್ಚಿನ ಜನರ ಓಡಾಟ ಇರುವಂತಹ ಆರ್.ಟಿ.ಒ ಕಚೇರಿ, ನಾಡಕಚೇರಿಗಳು, ರೈತ ಸಂಪರ್ಕ ಕೇಂದ್ರಗಳು, ಉಪ ನೋಂದಣಾಧಿಕಾರಿ ಕಚೇರಿ, ಕರ್ನಾಟಕ ಒನ್ ಹಾಗೂ ಬ್ಯಾಂಕ್ಗಳ ಮುಂದೆ ಕೋವಿಡ್-19 ಸಂಬಂಧ ಅಂತರ ಕಾಪಾಡುವ ನಿಟ್ಟಿನಲ್ಲಿ ಬ್ಯಾರಿಕೇಡ್ ಅಳವಡಿಸಬೇಕು. ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ಸಿಬ್ಬಂದಿ ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.