<p><strong>ಯಾದಗಿರಿ: </strong>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಕುರಿತು ರಾಜ್ಯದಲ್ಲಿ ಚರ್ಚೆ ನಡೆಯುತ್ತಿದ್ದು, ಬದಲಾವಣೆ ಮಾಡಬಾರದು ಎಂದು ಜಿಲ್ಲೆಯ ಮಠಾಧೀಶರು ಬಿಜೆಪಿ ಹೈಕಮಾಂಡ್ಗೆ ಆಗ್ರಹಿಸಿದ್ದಾರೆ.</p>.<p>ನಗರದಲ್ಲಿ ಜಿಲ್ಲೆಯ ವೀರಶೈವ ಮಠಾಧಿಪತಿಗಳ ಒಕ್ಕೂಟ ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ವಿವಿಧ ಮಠಗಳ ಮಠಾಧೀಶರು ಬಿ.ಎಸ್.ಯಡಿಯೂರಪ್ಪ ಪರ ಬ್ಯಾಟಿಂಗ್ ಬೀಸಿದರು. ಸಿಎಂ ಬದಲಾಯಿಸಿದರೆ ಬಿಜೆಪಿಗೆ ಸಮಸ್ಯೆ ಆಗುತ್ತದೆ ಎಂದು ಎಚ್ಚರಿಸಿದರು.</p>.<p>ಅಬ್ಬೆತುಮಕೂರಿನ ಸಿದ್ಧಸಂಸ್ಥಾನ ಮಠದ ಪೀಠಾಧಿಪತಿ ಗಂಗಾಧರ ಸ್ವಾಮೀಜಿ ಮಾತನಾಡಿ, ‘ಯಡಿಯೂರಪ್ಪ ಹೋರಾಟಗಳಿಂದಲೇ ರಾಜಕೀಯದಲ್ಲಿ ಮೇಲೆ ಬಂದಿದ್ದಾರೆ. ಅಂಥವರನ್ನು ಯಾವುದೇ ಕಾರಣ ನೀಡಿ ಸಿಎಂ ಸ್ಥಾನದಿಂದ ಕೆಳಗಿಸುವುದು ಸರಿಯಲ್ಲ. ಸಮರ್ಥವಾಗಿ ಆಡಳಿತ ನಡೆಸುತ್ತಿರುವ ಅವರನ್ನು ಬದಲಾಯಿಸುವುದರಿಂದ ರಾಜ್ಯಕ್ಕೆ ನಷ್ಟ ಉಂಟಾಗಲಿದೆ’ ಎಂದರು.</p>.<p>ಗುರುಮಠಕಲ್ ಖಾಸಾ ಮಠದ ಪೀಠಾಧಿಪತಿ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ‘ರಾಜ್ಯದಲ್ಲಿ ಬಿಜೆಪಿಗೆ ಗಟ್ಟಿ ಸ್ಥಾನ ನೀಡಿ, ಪಕ್ಷದಲ್ಲಿ ಎಲ್ಲರಿಗೂ ಆದ್ಯತೆ ನೀಡಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಬಿಜೆಪಿ ಹೈಕಮಾಂಡ್ ರಾಜ್ಯದ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಕೈ ಬಿಡಬೇಕು’ ಎಂದು ಒತ್ತಾಯಿಸಿದರು.</p>.<p>ಹೆಡಗಿಮದ್ರಾದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ‘ರಾಜ್ಯದಲ್ಲಿ ನಾಯಕರಿಗೆ ಕೊರತೆ ಇಲ್ಲ. ಆದರೆ, ಹಿರಿಯ ರಾಜಕಾರಣಿ ಯಡಿಯೂರಪ್ಪ ಅವರಲ್ಲಿ ಯಾವುದೇ ಕೊರತೆ ಇಲ್ಲ. ಸೂಕ್ತ ಕಾರಣ ನೀಡದೇ ಬದಲಾವಣೆ ಮಾಡುವುದು ಸರಿಯಲ್ಲ’ ಎಂದರು.</p>.<p>ಮಠಾಧೀಶರು ಒಂದು ಪಕ್ಷದ ಪರವಾಗಿ ಇದ್ದಾರೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜಕೀಯ ಮಾಡುವವರಿಗೆಮಠಾಧೀಶರು ಹಿಂದಿನಿಂದಲೂ ಸಲಹೆ ಸೂಚನೆ ನೀಡುತ್ತಾ ಬಂದಿದ್ದಾರೆ. ಹಾಗೆಯೇ ನಾವು ಮಾರ್ಗದರ್ಶನ ನೀಡುತ್ತೇವೆ’ ಎಂದರು.</p>.<p>ನೇರಡಗುಂಬದ ಪಂಚಮಸಿದ್ದಲಿಂಗ ಸ್ವಾಮೀಜಿ, ಶಹಾಪುರದ ಫಕೀರೇಶ್ವರ ಮಠದ ಪೀಠಾಧಿಪತಿ ಗುರುಪಾದಯ್ಯ ಸ್ವಾಮೀಜಿ, ದಾಸಬಾಳ ಮಠದ ವೀರೇಶ್ವರ ಸ್ವಾಮೀಜಿ, ಕಡೇಚೂರಿನ ಗುರುಮೂರ್ತಿ ಶಿವಾಚಾರ್ಯ, ಕೆಂಭಾವಿ ಹಿರೇಮಠದ ಚನ್ನಬಸವ ಶಿವಾಚಾರ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಕುರಿತು ರಾಜ್ಯದಲ್ಲಿ ಚರ್ಚೆ ನಡೆಯುತ್ತಿದ್ದು, ಬದಲಾವಣೆ ಮಾಡಬಾರದು ಎಂದು ಜಿಲ್ಲೆಯ ಮಠಾಧೀಶರು ಬಿಜೆಪಿ ಹೈಕಮಾಂಡ್ಗೆ ಆಗ್ರಹಿಸಿದ್ದಾರೆ.</p>.<p>ನಗರದಲ್ಲಿ ಜಿಲ್ಲೆಯ ವೀರಶೈವ ಮಠಾಧಿಪತಿಗಳ ಒಕ್ಕೂಟ ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ವಿವಿಧ ಮಠಗಳ ಮಠಾಧೀಶರು ಬಿ.ಎಸ್.ಯಡಿಯೂರಪ್ಪ ಪರ ಬ್ಯಾಟಿಂಗ್ ಬೀಸಿದರು. ಸಿಎಂ ಬದಲಾಯಿಸಿದರೆ ಬಿಜೆಪಿಗೆ ಸಮಸ್ಯೆ ಆಗುತ್ತದೆ ಎಂದು ಎಚ್ಚರಿಸಿದರು.</p>.<p>ಅಬ್ಬೆತುಮಕೂರಿನ ಸಿದ್ಧಸಂಸ್ಥಾನ ಮಠದ ಪೀಠಾಧಿಪತಿ ಗಂಗಾಧರ ಸ್ವಾಮೀಜಿ ಮಾತನಾಡಿ, ‘ಯಡಿಯೂರಪ್ಪ ಹೋರಾಟಗಳಿಂದಲೇ ರಾಜಕೀಯದಲ್ಲಿ ಮೇಲೆ ಬಂದಿದ್ದಾರೆ. ಅಂಥವರನ್ನು ಯಾವುದೇ ಕಾರಣ ನೀಡಿ ಸಿಎಂ ಸ್ಥಾನದಿಂದ ಕೆಳಗಿಸುವುದು ಸರಿಯಲ್ಲ. ಸಮರ್ಥವಾಗಿ ಆಡಳಿತ ನಡೆಸುತ್ತಿರುವ ಅವರನ್ನು ಬದಲಾಯಿಸುವುದರಿಂದ ರಾಜ್ಯಕ್ಕೆ ನಷ್ಟ ಉಂಟಾಗಲಿದೆ’ ಎಂದರು.</p>.<p>ಗುರುಮಠಕಲ್ ಖಾಸಾ ಮಠದ ಪೀಠಾಧಿಪತಿ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ‘ರಾಜ್ಯದಲ್ಲಿ ಬಿಜೆಪಿಗೆ ಗಟ್ಟಿ ಸ್ಥಾನ ನೀಡಿ, ಪಕ್ಷದಲ್ಲಿ ಎಲ್ಲರಿಗೂ ಆದ್ಯತೆ ನೀಡಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಬಿಜೆಪಿ ಹೈಕಮಾಂಡ್ ರಾಜ್ಯದ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಕೈ ಬಿಡಬೇಕು’ ಎಂದು ಒತ್ತಾಯಿಸಿದರು.</p>.<p>ಹೆಡಗಿಮದ್ರಾದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ‘ರಾಜ್ಯದಲ್ಲಿ ನಾಯಕರಿಗೆ ಕೊರತೆ ಇಲ್ಲ. ಆದರೆ, ಹಿರಿಯ ರಾಜಕಾರಣಿ ಯಡಿಯೂರಪ್ಪ ಅವರಲ್ಲಿ ಯಾವುದೇ ಕೊರತೆ ಇಲ್ಲ. ಸೂಕ್ತ ಕಾರಣ ನೀಡದೇ ಬದಲಾವಣೆ ಮಾಡುವುದು ಸರಿಯಲ್ಲ’ ಎಂದರು.</p>.<p>ಮಠಾಧೀಶರು ಒಂದು ಪಕ್ಷದ ಪರವಾಗಿ ಇದ್ದಾರೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜಕೀಯ ಮಾಡುವವರಿಗೆಮಠಾಧೀಶರು ಹಿಂದಿನಿಂದಲೂ ಸಲಹೆ ಸೂಚನೆ ನೀಡುತ್ತಾ ಬಂದಿದ್ದಾರೆ. ಹಾಗೆಯೇ ನಾವು ಮಾರ್ಗದರ್ಶನ ನೀಡುತ್ತೇವೆ’ ಎಂದರು.</p>.<p>ನೇರಡಗುಂಬದ ಪಂಚಮಸಿದ್ದಲಿಂಗ ಸ್ವಾಮೀಜಿ, ಶಹಾಪುರದ ಫಕೀರೇಶ್ವರ ಮಠದ ಪೀಠಾಧಿಪತಿ ಗುರುಪಾದಯ್ಯ ಸ್ವಾಮೀಜಿ, ದಾಸಬಾಳ ಮಠದ ವೀರೇಶ್ವರ ಸ್ವಾಮೀಜಿ, ಕಡೇಚೂರಿನ ಗುರುಮೂರ್ತಿ ಶಿವಾಚಾರ್ಯ, ಕೆಂಭಾವಿ ಹಿರೇಮಠದ ಚನ್ನಬಸವ ಶಿವಾಚಾರ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>